ಶ್ರೀ ಶಾಂತ ವೀರ ಸ್ವಾಮೀಜಿಗಳು ಹೃದಯಾಘಾತದಿಂದ ಸಾವು…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: ಬೆಂಗಳೂರಿನ ಶಾಂತಿನಗರದಲ್ಲಿರುವ ಕೊಳದ ಮಠದಲ್ಲಿದ ಶ್ರೀ ಶಾಂತವೀರ ಸ್ವಾಮೀಜಿಗಳು (80) ಶನಿವಾರ ಲಿಂಗೈಕ್ಯರಾಗಿದ್ದಾರೆ. ಶ್ರೀಗಳು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಕೊಳದ ಮಠದಲ್ಲಿ ಶ್ರೀ ಶಾಂತವೀರ ಸ್ವಾಮೀಜಿಗಳು ಎಂದಿನಂತೆ ತಮ್ಮ ನಿತ್ಯ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದು, ಚಿಕಿತ್ಸೆಗೆ ಕೊಡಿಸಿದರು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ ಎಂಬುದು ತಿಳಿದುಬಂದಿದೆ.
What’s your Reaction?
+1
+1
+1
+1
+1
+1
+1