ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಲಾರಿಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಡಿಕೆಯನ್ನು ಕೇಂದ್ರ ಜಿಎಸ್ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
7 ಕೋಟಿ ಮೌಲ್ಯದ 210 ಟನ್ಅಡಿಕೆಯನ್ನು ಕೇಂದ್ರ ಜಿಎಸ್ಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದು ಪರಿಶೀಲನೆ ಮಾಡುತ್ತಿದ್ದಾರೆ.
ಶಿವಮೊಗ್ಗದಿಂದ ಹೊಸಪೇಟೆ ಕಡೆಗೆ ಅಡಿಕೆ ಹೊತ್ತ 7 ಲಾರಿಗಳು ಸಾಗುತ್ತಿದ್ದವು. ಚಿತ್ರದುರ್ಗ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಿಎಸ್ಟಿ ಅಧಿಕಾರಿ ಹಮೀದ್ಸಿದ್ಧಿಕಿ ನೇತೃತ್ವದ ತಂಡ ಲಾರಿಗಳನ್ನು ತಡೆದು ಪರಿಶೀಲನೆ ನಡೆಸಿತು. ಜಿಎಸ್ಟಿ ಪಾವತಿ ಸಂಬಂಧ ಸಮರ್ಪಕವಾದ ದಾಖಲೆ ಸಲ್ಲಿಸದ ಕಾರಣ 7 ಲಾರಿಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗಿ 210 ಟನ್ ಅಡಿಕೆ ಇರುವುದು ತಿಳಿದು ಬಂದಿದೆ.
ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಲಾರಿಗಳನ್ನು ನಿಲ್ಲಿಸಲಾಗಿದೆ. ಜಿಎಸ್ಟಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.