ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪಿಯು ವಿದ್ಯಾರ್ಥಿನಿ

News Desk

ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ:
ಪ್ರಥಮ ಪಿಯುಸಿ ಪರೀಕ್ಷೆಯಲ್ಲಿ ನಕಲು ಮಾಡಿದ ಆರೋಪದಿಂದ ಮನನೊಂದ ವಿದ್ಯಾರ್ಥಿನಿ ಒಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ನಗರದಲ್ಲಿ ನಡೆದಿದೆ.

- Advertisement - 

ತೇಜಸ್ವಿನಿ ದೊಡ್ಡಮನಿ (17) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಮುಧೋಳ ನಗರದ ಶಾರದಾ ಖಾಸಗಿ ಪಿಯು ಕಾಲೇಜಿನಲ್ಲಿ ಮೃತ ತೇಜಸ್ವಿನಿ ದೊಡ್ಡಮನಿ ಪ್ರಥಮ ಪಿಯುಸಿ ಸೈನ್ಸ್​ ಓದುತ್ತಿದ್ದಳು. ಫೆಬ್ರವರಿ 27 ರಂದು ರಸಾಯನಶಾಸ್ತ್ರ ವಿಷಯದ ವಾರ್ಷಿಕ ಪರೀಕ್ಷೆ ನಡೆದಿತ್ತು. ಪರೀಕ್ಷೆಯಲ್ಲಿ ತೇಜಸ್ವಿನಿ ನಕಲು‌ಮಾಡುವುದನ್ನು ಕಂಡ ಕಾಲೇಜು ಸಿಬ್ಬಂದಿ ಪ್ರಶ್ನೆ ಮಾಡಿದ್ದರು.

- Advertisement - 

ತೇಜಸ್ವಿನಿ ತನ್ನ ಪೋಷಕರಿಗೆ ಈ ವಿಚಾರ ತಿಳಿಸಿದ್ದಳು. ಬಳಿಕ, ಪೋಷಕರು ಫೆಬ್ರವರಿ 28 ರಂದು ಕಾಲೇಜಿಗೆ ಬಂದು, ನಕಲು‌ಮಾಡಿದ್ದಕ್ಕೆ ಸಾಕ್ಷಿ ಕೇಳಿದ್ದರು. ಆಗ ಕಾಲೇಜು ಸಿಬ್ಬಂದಿ ಸಿಸಿ‌ಕ್ಯಾಮೆರಾ ದೃಶ್ಯ ತೋರಿಸಲು ಮುಂದಾದರು. ಅಲ್ಲದೇ, ಕಾಲೇಜು ಸಿಬ್ಬಂದಿ ಪೋಷಕರ‌ಸಮ್ಮುಖದಲ್ಲಿ ತೇಜಸ್ವಿನಿಗೆ ಬುದ್ದಿವಾದ ಹೇಳಿದ್ದಾರೆ.

ಈ ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ತೇಜಸ್ವಿನಿ ಕಾಲೇಜಿನಿಂದ ಹೊರಗೆ ಓಡಿ ಹೋಗಿದ್ದಾಳೆ. ಎಷ್ಟೂ ಹುಡುಕಿದರೂ ತೇಜಸ್ವಿನಿ ಸಿಗಲಿಲ್ಲ. ಬಳಿಕ, ಪೋಷಕರು ಮುಧೋಳ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ದೂರು ದಾಖಲಿಸಿದ್ದರು. ಮಾರ್ಚ್-2ರಂದು ಭಾನುವಾರ ಮಹಾರಾಣಿ ಕೆರೆಯಲ್ಲಿ ತೇಜಸ್ವಿನಿ ಶವವಾಗಿ ಪತ್ತೆಯಾಗಿದ್ದಾಳೆ. ಮುಧೋಳ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

- Advertisement - 

 

Share This Article
error: Content is protected !!
";