ಗೋದ್ರಾ ಹತ್ಯಾಕಾಂಡ ಘಟನೆಯ ಹೊಣೆಹೊತ್ತು ಮೋದಿ ರಾಜೀನಾಮೆ ನೀಡಿದ್ದಾರ?-ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿಯಾಗಿದ್ದಾಗ ಗೋದ್ರಾದಲ್ಲಿ ಹತ್ಯಾಕಾಂಡ ನಡೆದು, ಸಾವಿರಾರು ಅಮಾಯಕರು ಬಲಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. 

ವಿಮಾನ ಅಪಘಾತ, ರೈಲ್ವೇ ದುರಂತಗಳು ಸಾಲು ಸಾಲು ನಡೆದು ಎಷ್ಟೋ ಜನ ಬಲಿಯಾಗಿದ್ದಾರೆ, ಮಣಿಪುರ ಕಳೆದ ಕೆಲವು ವರ್ಷಗಳಿಂದ ಹೊತ್ತಿ ಉರಿಯುತ್ತಿದೆ, ಅಲ್ಲಿ ನಿತ್ಯವೂ ಜನ ಸಾಯುತ್ತಿದ್ದರೆ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸೇತುವೆ ಕುಸಿದು ಜನ ಪ್ರಾಣ ಕಳೆದುಕೊಂಡಿದ್ದಾರೆ.

- Advertisement - 

ಆಗೆಲ್ಲ ಘಟನೆಯ ಹೊಣೆಹೊತ್ತು ಬಿಜೆಪಿಯವರು ರಾಜೀನಾಮೆ ನೀಡಿದ್ದಾರ? ಇದು ಸಮರ್ಥನೆ ಅಲ್ಲ, ವಾಸ್ತವಾಂಶ. ಸಾವು- ನೋವಿನಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎನ್ನುವುದನ್ನು ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";