ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಖ್ಯಾತ ರಂಗಭೂಮಿ ಕಲಾವಿದ, ಕನ್ನಡ ಸಿನೆಮಾ ನಟ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ(60) ಅವರು ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಇವರು ಪಾತ್ರವಹಿಸುತ್ತಿದ್ದರು.
ಕಲಾವಿದ ಯಶವಂತ ಸರದೇಶಪಾಂಡೆ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕ ಸಾವು ಸಂಭವಿಸಿದ್ದು ಕನ್ನಡದ ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ.
ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾವಪ್ಪನ್ನಪ್ಪಿದ್ದಾರೆ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.
ಯಶವಂತ ಅವರು ಕಿರುತೆರೆ ಮತ್ತು ಚಲನಚಿತ್ರಗಳಲ್ಲೂ ನಟನೆ ಮಾಡುತ್ತಿದ್ದರು. ಆರಂಭದಲ್ಲಿ ಅವರು ನಾಟಕಗಳನ್ನು ನಿರ್ದೇಶಿಸಿ, ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು. ಅವರು ಹೆಚ್ಚು ಹಾಸ್ಯ ನಾಟಕಗಳಲ್ಲಿ ನಟಿಸುತ್ತಿದ್ದರು. ಕರ್ನಾಟಕ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲಿಯೂ ನಾಟಕಗಳನ್ನು ಮಾಡಿದ್ದರು. ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ.
ಯಶವಂತ ಅವರು ನಾಟಕಗಳಲ್ಲಿ ಮಾತ್ರವಲ್ಲದೆ ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲೂ ನಟಿಸಿದ್ದರು. ಅಲ್ಲಿಯೂ ಹಾಸ್ಯ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದರು. ‘ಆಲ್ ದಿ ಬೆಸ್ಟ್’ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು.‘ರಾಮ ಶ್ಯಾಮ ಭಾಮಾ’ ಸಿನಿಮಾದಲ್ಲಿ ನಟಿಸಿ ಅವರು ಗಮನ ಸೆಳೆದಿದ್ದರು.

