ದಲಿತರ ಬೆನ್ನಿಗೆ ಚೂರಿ ಹಾಕಿದ ದಲಿತ ವಿರೋಧಿ ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ದಲಿತರನ್ನು ಕೇವಲ ಮತಬ್ಯಾಂಕ್‌ ಆಗಿ ಬಳಸಿಕೊಳ್ಳುತ್ತಲೇ ಬಂದಿರುವ ಕರ್ನಾಟಕ ಕಾಂಗ್ರೆಸ್
ಮತ್ತೆ ದಲಿತರ ಬೆನ್ನಿಗೆ ಚೂರಿ ಹಾಕಿದೆ ಎಂದು ಜೆಡಿಎಸ್ ಗಂಭೀರ ಆರೋಪ ಮಾಡಿದೆ.
ಮಜಾವಾದಿ ಸಿದ್ದರಾಮಯ್ಯ ಅಹಿಂದ ಸಮುದಾಯಕ್ಕೆ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು.

ದಲಿತ ವಿರೋಧಿ ಸಿದ್ದರಾಮಯ್ಯ 2025-26ನೇ ಸಾಲಿನಲ್ಲಿ SCSP/TSP ಕಾರ್ಯಕ್ರಮಗಳಿಗೆ ಮೀಸಲಿಟ್ಟಿದ್ದ 42,017.51 ಕೋಟಿಯಲ್ಲಿ  11,896.84 ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗೆ ಹಂಚಿಕೆ ಮಾಡಿಕೊಳ್ಳುತ್ತಿದೆ ಎಂದು ಜೆಡಿಎಸ್ ದೂರಿದೆ.

- Advertisement - 

ಪರಿಶಿಷ್ಟರ SCSP/TSP ಹಣಕ್ಕೆ ಕನ್ನ ಹಾಕಿದ ಸಿದ್ದರಾಮಯ್ಯ ! 2025-26ನೇ ಸಾಲಿನಲ್ಲಿ 11,896.84 ಕೋಟಿ, 2024-25ನೇ ಸಾಲಿನಲ್ಲಿ 14.282.38 ಕೋಟಿ,  2023-24ನೇ ಸಾಲಿನಲ್ಲಿ 11,114 ಕೋಟಿ ಎಂದು ಜೆಡಿಎಸ್ ಅಂಕಿ ಅಂಶ ನೀಡಿದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕಲ್ಯಾಣಕ್ಕೆ ವಿನಿಯೋಗವಾಗಬೇಕಿದ್ದ ಸಾವಿರಾರು ಕೋಟಿ ಹಣವನ್ನ ಅವೈಜ್ಞಾನಿಕ ಗ್ಯಾರಂಟಿಗಳಿಗೆ ದುರುಪಯೋಗ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ ಮತ್ತೊಮ್ಮೆ ದಲಿತರಿಗೆ ದ್ರೋಹ ಮಾಡುತ್ತಿದೆ ಎಂದು ಜೆಡಿಎಸ್ ಹರಿಹಾಯ್ದಿದೆ.

- Advertisement - 

 

 

 

Share This Article
error: Content is protected !!
";