ರಾಜಕಾರಣ ಹಾಗೂ ಕ್ರಿಕೆಟ್ ಎರಡೂ ಸಹ ಬೇರೆ ಬೇರೆ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜಕಾರಣ ಮತ್ತು ಕ್ರಿಕೆಟ್ ಎರಡೂ ಒಂದೇ ಆಗಲು ಸಾಧ್ಯವಿಲ್ಲ, ರಾಜಕಾರಣವೇ ಬೇರೆ, ಕ್ರಿಕೆಟೇ ಬೇರೆ ಎಂದು ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿದರು.

- Advertisement - 

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯಲ್ಲಿ ಭಾನುವಾರ ಆಯೋಜಿಸಲಾಗಿದ್ದ ೧೯೮೩ ವಿಶ್ವಕಪ್ ವಿಜೇತ ಭಾರತ ತಂಡದ ಸದಸ್ಯ, ಕನ್ನಡಿಗ ಸೈಯದ್ ಕಿರ್ಮಾನಿ ಅವರ ಆತ್ಮಕಥೆ “ಸ್ಟಂಪ್ಡ್ : ಲೈಫ್ ಬಿಹೈಂಡ್ ಯಂಡ್ ಬಿಯಾಂಡ್ ದಿ ಟ್ವೆಂಟಿ ಟು ಯಾರ್ಡ್ಸ್” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

- Advertisement - 

ರಾಜಕಾರಣಿಗಳು ಕ್ರಿಕೆಟ್‌ನಿಂದ ಯಾವಾಗಲೂ ದೂರವಿರಬೇಕು. ಆದರೆ ನಾನು ಡಿಸಿಎಂ ಆಗಿ ಅಲ್ಲ ಬದಲಿಗೆ ಸೈಯದ್ ಕಿರ್ಮಾನಿಯವರ ಅಭಿಮಾನಿಯಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ. ಶಾಲಾ ದಿನಗಳಿಂದಲೂ ನಾನು ಸೈಯದ್ ಕಿರ್ಮಾನಿ, ಜಿ.ಆರ್.ವಿಶ್ವನಾಥ್ ಹಾಗೂ ಬಿ. ಎಸ್. ಚಂದ್ರಶೇಖರ್ ಅವರ ಅಭಿಮಾನಿ ಎಂದರು.

ಆ ದಿನಗಳಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿಯಾಗಿದ್ದ ನಾಗರಾಜ್ ಅವರ ಮಗ ಹಾಗೂ ನಾನು ಸಹಪಾಠಿಗಳಾಗಿದ್ದೆವು. ಆಗ ನಾನು ಅವರ ಬಳಿ ಭಾರತ – ಪಾಕಿಸ್ತಾನ ಸೇರಿದಂತೆ ಬೇರೆ ಬೇರೆ ಪಂದ್ಯಗಳ ಟಿಕೆಟ್ ಕೇಳುತ್ತಿದ್ದೆ. ನಂತರ ಕಾಲೇಜು ದಿನಗಳಲ್ಲಿ ವಿದ್ಯಾರ್ಥಿ ಸಂಘಟನೆಯ ಮುಖ್ಯಸ್ಥನಾದ ಬಳಿಕ ಪತ್ರ ಬರೆಸಿಕೊಂಡು ಬಂದು ನೂರು ಟಿಕೆಟ್ ಪಡೆದು ನಂತರ ಹಂಚುತ್ತಿದ್ದೆ ಎಂದು ನೆನಪಿಸಿಕೊಂಡರು.

- Advertisement - 

ಕಾರ್ಯಕ್ರಮದಲ್ಲಿ ಉದ್ಯಮಿ ಇನ್ಫೋಸಿಸ್, ಮುಖ್ಯಸ್ಥ ಎನ್. ಆರ್. ನಾರಾಯಣಮೂರ್ತಿ, ಮಾಜಿ ಕ್ರಿಕೆಟಿಗರಾದ ಕಪಿಲ್ ದೇವ್, ಎರ್ರಪಳ್ಳಿ ಪ್ರಸನ್ನ, ರಾಹುಲ್ ದ್ರಾವಿಡ್, ಅನಿಲ್ ಕುಂಬ್ಳೆ, ಬ್ರಿಜೇಶ್ ಪಟೇಲ್, ವಿ.ವಿ.ಎಸ್. ಲಕ್ಷ್ಮಣ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿದ್ದರು.

 

Share This Article
error: Content is protected !!
";