ಚಂದ್ರವಳ್ಳಿ ನ್ಯೂಸ್, ಕೊಪ್ಪಳ:
ಕೊಪ್ಪಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಶಿವರಾಜ ತಂಗಡಗಿ ಮೇಲೆ ಗರಂ ಆದ ಪ್ರಸಂಗ ನಡೆದಿದೆ.
ಮಾಧ್ಯಮಗಳ ಜೊತೆ ಮುಖ್ಯಮಂತ್ರಿಗಳು ಮಾತನಾಡುವಾಗ ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮ ಕೂಗು ವಿಚಾರ ಪ್ರಸ್ತಾಪವಾಗಿದೆ. ಈ ಬಗ್ಗೆ ನಿಮ್ಮ ನಿಲುವು ಏನು ಎಂದು ವರದಿಗಾರರು ಕೇಳಿದ ಪ್ರಶ್ನೆಯನ್ನ
ಸಚಿವ ತಂಗಡಗಿ ಸಿಎಂಗೆ ಪುನರುಚ್ಛರಿಸಿದಾಗ ಮುಖ್ಯಮಂತ್ರಿಗಳು ಗರಂ ಆದರಲ್ಲದೆ ಅದರಲ್ಲಿ ನನ್ನ ನಿಲುವೇನಿಲ್ಲ. ಪ್ರತ್ಯೇಕ ಧರ್ಮದ ಬಗ್ಗೆ ಮುನ್ನೆಲೆ ಇಲ್ಲ, ಹಿನ್ನೆಲೆಯೂ ಇಲ್ಲ. ಕೆಲವು ವಿರಕ್ತ ಸ್ವಾಮೀಜಿಗಳು ಅದರ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

