ಬಡವರನ್ನೇ ನಿರ್ಮೂಲನೆ ಮಾಡಲು ಹೊರಟ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಡತನ ನಿರ್ಮೂಲನೆ ಮಾಡುವ ಬದಲು
, ಬಡವರನ್ನೇ ನಿರ್ಮೂಲನೆ ಮಾಡಲು ಹೊರಟಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಜೆಡಿಎಸ್ ತಿಳಿಸಿದೆ. ಭ್ರಷ್ಟ  ಕಾಂಗ್ರೆಸ್‌ ಸರ್ಕಾರದ ವಕ್ರದೃಷ್ಟಿ ಈಗ ಅಶಕ್ತ ನಾಗರಿಕರ ಪಿಂಚಣಿ ಹಣದ ಮೇಲೆ ಬಿದ್ದಿದೆ.

- Advertisement - 

ಅವೈಜ್ಞಾನಿಕ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಬೊಕ್ಕಸ ಬರಿದುಮಾಡಿರುವ ಸಿದ್ದರಾಮಯ್ಯ ಸರ್ಕಾರ, ಮಾಸಿಕ ಪಿಂಚಣಿ ಪಡೆಯುತ್ತಿರುವವರ ಪೈಕಿ 23.19 ಲಕ್ಷ ಅನರ್ಹರನ್ನು ಮಾಡಿ, ಅವರ ತುತ್ತು ಅನ್ನಕ್ಕೂ ಕಲ್ಲು ಹಾಕಲು ಹೊರಟಿದೆ ಎಂದು ಜೆಡಿಎಸ್ ಟೀಕಾಪ್ರಹಾರ ಮಾಡಿದೆ. 

- Advertisement - 

ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ಯೋಜನೆಯಡಿ ಮಾಸಾಶನ ಪಡೆಯುತ್ತಿದ್ದ 23.19 ಲಕ್ಷ ಅಸಹಾಯಕ, ಅಶಕ್ತ, ವೃದ್ಧರು, ಅಂಗವಿಕಲರು ಮತ್ತು ವಿಧವೆಯರ ಪೆನ್ಶನ್‌ ದುಡ್ಡಿಗೆ ಕೊಕ್ಕೆ ಹಾಕುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

 

- Advertisement - 

Share This Article
error: Content is protected !!
";