ನಿಗದಿತ ಸಮಯಕ್ಕೆ ಕೆಲಸಕ್ಕೆ ಹಾಜರಾಗಲು ಡೀಸಿ ಸೂಚನೆ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಸರ್ಕಾರಿ ಅಧಿಕಾರಿ/ ನೌಕರರು ನಿಗದಿತ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಕಚೇರಿಯ ಅಧಿಕಾರಿ/ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸಕಾಲಕ್ಕೆ ಕಚೇರಿ ಕೆಲಸಕ್ಕೆ ಹಾಜರಾಗಿ ವಹಿಸಿದ ಕೆಲಸ-ಕಾರ್ಯಗಳನ್ನು ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು.

- Advertisement - 

ಅಧಿಕಾರಿ/ ನೌಕರರು ಪ್ರತಿ ದಿನ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು. ಕಚೇರಿ ವೇಳೆಯಲ್ಲಿ ಕರ್ತವ್ಯದ ಸ್ಥಳದಲ್ಲಿ ಹಾಜರಿರಬೇಕು. ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳಬಾರದು. ಸ್ವೀಕೃತ ಕಡತಗಳನ್ನು ಇ-ಆಫೀಸ್ ಮೂಲಕವೇ ಮುಂದಿನ ಹಂತಕ್ಕೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ಇತರೆ ಇಲಾಖೆ ಕಚೇರಿಗಳಿಗೂ ಅನಿರೀಕ್ಷಿತ ಭೇಟಿ ನೀಡಿ ಸಿಬ್ಬಂದಿಗಳ ಸಮಯ ಪಾಲನೆ, ಕಾರ್ಯಕ್ಷಮತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

- Advertisement - 

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು.

 

Share This Article
error: Content is protected !!
";