ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಡಿಕೆ ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗಬೇಕು ಎನ್ನುವುದು ರಾಮನಗರ ಜಿಲ್ಲೆಯ ಎಲ್ಲ ಶಾಸಕರಿಗಿದೆ. ಆದರೆ ಅವರು ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ ಅನ್ನುತ್ತಾರೆ ಎಂದು ಚನ್ನಪಟ್ಟಣ ಶಾಸಕ ಸಿಪಿ ಯೋಗೇಶ್ವರ್ ಹೇಳಿದರು.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜನಾಭಿಪ್ರಾಯ ಅದೇ ಆಗಿದೆ ಮತ್ತು ಜಿಲ್ಲೆಯ ಶಾಸಕರು ಸಹ ಅದನ್ನು ಬಯಸುತ್ತೇವೆ, ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು, ಆದರೆ ತಮ್ಮ ಪಕ್ಷದ ಹೈಕಮಾಂಡ್ ಅದನ್ನೆಲ್ಲ ತೀರ್ಮಾನಿಸುತ್ತದೆ, ತಾನೇನಿದ್ದರೂ ಅಭಿಪ್ರಾಯ ತಿಳಿಸಬಹುದಷ್ಟೇ ಎಂದು ಯೋಗೇಶ್ವರ್ ತಿಳಿಸಿದರು.