ಜ್ಞಾನ ಗಂಗೋತ್ರಿಯಲ್ಲಿ ಪರಿಸರ ದಿನ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಜಿ.ಆರ್.ಹಳ್ಳಿಯ ದಾವಣಗೆರೆ ವಿಶ್ವವಿದ್ಯಾಲಯ ಸ್ನಾತಕೋತ್ತರಕೇಂದ್ರದ ರಸಾಯನಶಾಸ್ತ್ರ ಅಧ್ಯಯನ ವಿಭಾಗದ ವತಿಯಿಂದ ಪರಿಸರ ದಿನ ಆಚರಿಸಲಾಯಿತು.

- Advertisement - 

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.  
ಸಂಪನ್ಮೂಲ ವ್ಯಕ್ತಿ ಡಾ. ಸಿ.ಹಾಲೇಶಿ ವಿಶೇಷ ಉಪನ್ಯಾಸ ನೀಡಿದರು. ವಿಭಾಗದ ಸಂಯೋಜನಾಧಿಕಾರಿ ಡಾ.ಕೀರ್ತಿಕುಮಾರ್ ಅಧ್ಯಕ್ಷತೆ ವಹಿಸಿದರು.

- Advertisement - 

ಈ ಸಂದರ್ಭದಲ್ಲಿ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರಾಜೇಂದ್ರ ಪ್ರಸಾದ್ ಹಾಗೂ ಸಸ್ಯಶಾಸ್ತ್ರ ವಿಭಾಗದ ಸಂಯೋಜಕಿ ಬಿ.ಟಿ. ನಿವೇದಿತ ಹಾಜರಿದ್ದರು. ಪ್ರಾಧ್ಯಾಪಕರುಗಳು ಹಾಗೂ ವಿದ್ಯಾರ್ಥಿಗಳು ಸಸಿ ನೆಟ್ಟರು.

 

- Advertisement - 

 

Share This Article
error: Content is protected !!
";