ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೈಟು ಲಪಟಾಯಿಸಿ ಸ್ವಾಭಿಮಾನಿ ಸಮಾವೇಶ ಮಾಡಿದರೆ ಪಾಪ ಕಳೆದುಹೋಗುತ್ತದೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರ ಪತ್ನಿಯವರಿಗೆ 14 ನಿವೇಶನ ಹಂಚಿಕೆ ಮಾಡುವಲ್ಲಿ ಹಲವು ಅಕ್ರಮಗಳು ನಡೆದಿವೆ ಎಂದು ಇ.ಡಿ. ವರದಿಯಲ್ಲಿ ಬಯಲಾಗಿದ್ದು, ಮೂಡಾ ಪ್ರಕರಣದಲ್ಲಿ ನನ್ನ ಪಾತ್ರವೇ ಇಲ್ಲ ಎನ್ನುತ್ತಿದ್ದ ಮುಖ್ಯಮಂತ್ರಿಗಳು ಈಗ ಅನೇಕ ಪ್ರಶ್ನೆಗಳಿಗೆ ಉತ್ತರಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯನವರೇ, ನಮ್ಮ ದೇಶದಲ್ಲಿ ಕಾನೂನು ಇನ್ನೂ ಗಟ್ಟಿಯಾಗಿದೆ. ತರಾತುರಿಯಲ್ಲಿ ಲೋಕಾಯುಕ್ತ ತನಿಖೆ ಮುಗಿಸಿ ಕ್ಲೀನ್ ಚಿಟ್ ಪಡೆದುಕೊಂಡು ಜನರ ಕಣ್ಣಿಗೆ ಮಣ್ಣೆರೆಚುವ ನಿಮ್ಮ ತಂತ್ರ ಫಲಿಸುವುದಿಲ್ಲ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಸತ್ಯಮೇವ ಜಯತೇ! ಎಂದು ಸಿದ್ದರಾಮಯ್ಯ ವಿರುದ್ಧ ಅಶೋಕ್ ಕಿಡಿ ಕಾರಿದ್ದಾರೆ.