ರಾಜ್ಯದಲ್ಲಿ 40ಕ್ಕೂ ಹೆಚ್ಚು ನಕಲಿ ಔಷಧಗಳು ಪತ್ತೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳಪೆ ಗುಣಮಟ್ಟದ ಔಷಧಿಗಳಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಮತ್ತು ನವಜಾತ ಶಿಶುಗಳ ಸರಣಿ ಸಾವು ಆಗುತ್ತಿದ್ದರೂ
, ಭ್ರಷ್ಟ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬುದ್ಧಿ ಕಲಿತಿಲ್ಲ ಎಂದು ಜೆಡಿಎಸ್ ವಾಗ್ದಾಳಿ ಮಾಡಿದೆ.

- Advertisement - 

ರಾಜ್ಯದಲ್ಲಿ 40ಕ್ಕೂ ಅಧಿಕ ನಕಲಿ ಔಷಧಗಳು ಪತ್ತೆಯಾಗಿದ್ದು, ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಔಷಧಗಳು ಪೂರೈಕೆ ಜಾಲ ವ್ಯಾಪಕವಾಗಿವೆ ಎನ್ನುವ ವರದಿ ಆತಂಕ ಹುಟ್ಟಿಸುತ್ತಿದೆ ಎಂದು ಜೆಡಿಎಸ್ ಆತಂಕ ವ್ಯಕ್ತಪಡಿಸಿದೆ.

- Advertisement - 

ನಕಲಿ ಔಷಧಿಗಳಿಗೆ ಕಡಿವಾಣ ಹಾಕಬೇಕಾದ ಕಾಂಗ್ರೆಸ್‌ಸರ್ಕಾರ ಮತ್ತು ಅಧಿಕಾರಿಗಳು ಕಮಿಷನ್‌ಹಣಕ್ಕಾಗಿ ಕಂಪನಿಗಳ ಜತೆ ಶಾಮೀಲಾಗಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

ಶೇ.60ರಷ್ಟು ಸಿದ್ದರಾಮಯ್ಯ ಸರ್ಕಾರಕ್ಕೆ ಬಡವರ ಪ್ರಾಣದ ಬಗ್ಗೆ ಚಿಂತೆಯಿಲ್ಲ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ಈಜುಕೊಳ ಬಿಟ್ಟು ಹೊರಬಂದು ರಾಜ್ಯದ ಜನರಿಗೆ ಆರೋಗ್ಯದ ಗ್ಯಾರಂಟಿ ಕೊಡಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.

- Advertisement - 

Share This Article
error: Content is protected !!
";