ಮೈಸೂರು ಕಿಸಾನ್ ಮಾಲ್ ಸ್ಥಾಪನೆ: ಅರ್ಜಿ ಸಲ್ಲಿಕೆ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಸರ್ಕಾರ ಬಜೆಟ್‍ನಲ್ಲಿ ಪ್ರಸ್ತಾಪಿಸಿದಂತೆ, 2024-25ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ

- Advertisement - 

ಚಿತ್ರದುರ್ಗ ಜಿಲ್ಲೆಯ ತೋಟಗಾರಿಕೆ ಇಲಾಖೆ ಆವರಣದಲ್ಲಿ “ಮೈಸೂರು ಕಿಸಾನ್ ಮಾಲ್” ಸ್ಥಾಪಿಸಲು ಅರ್ಹ ರೈತ ಉತ್ಪಾದಕ ಸಂಸ್ಥೆಗಳಿಂದ ಆಸಕ್ತಿ ಅಭಿವ್ಯಕ್ತಪಡಿಸುವಿಕೆಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಡಿ.16 ರವರೆಗೆ ವಿಸ್ತರಿಸಲಾಗಿದೆ.  

- Advertisement - 

ಕರ್ನಾಟಕ ಪಬ್ಲಿಕ್ ಪ್ರೊಕ್ಯುರ್‍ಮೆಂಟ್ ಪೋರ್ಟ್‍ಲ್‍ನಲ್ಲಿ ಆಸಕ್ತ ರೈತರ ಉತ್ಪಾದಕ ಸಂಘಗಳು ಡಿ.16 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9449103240 ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

- Advertisement - 

Share This Article
error: Content is protected !!
";