ಆರೋಗ್ಯ ಇಲಾಖೆಗೆ ಅನಾರೋಗ್ಯ MRI, ಸಿಟಿ ಸ್ಕ್ಯಾನ್​ ಸೇವೆಗೆ ಹೊಸ ನಿಯಮ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದ ಆರೋಗ್ಯ ಇಲಾಖೆಗೆ ಅನಾರೋಗ್ಯ ಹಿಡಿಸಿದ್ದ ಕರ್ನಾಟಕ ಕಾಂಗ್ರೆಸ್  ಸರ್ಕಾರ, ಇದೀಗ ಮತ್ತೊಂದು ತುಘಲಕ್ ನಿರ್ಧಾರ ಕೈಗೊಂಡು ಸರ್ಕಾರಿ ಆಸ್ಪತ್ರೆಗಳ ನಂಬಿರುವ ಬಡವರ ಕೈಗೆ ಚೊಂಬು ನೀಡಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement - 

ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಭ್ಯವಿದ್ದ MRI ಮತ್ತು ಸಿಟಿ ಸ್ಕ್ಯಾನ್​ ಸೇವೆಗೆ ಹೊಸ ನಿಯಮಗಳನ್ನು ಸೇರಿಸಿದ ಕಾರಣ ರೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಂತಹ ಗಂಭೀರ ಸಮಸ್ಯೆ ಇದ್ದ ರೋಗಿಗಳು ಬಂದರೂ ಮೊದಲು ABRK ಅನುಮತಿ ಕಡ್ಡಾಯ ಮಾಡಲಾಗಿದೆ. ಆನ್​ಲೈನ್​ನಲ್ಲಿ ABRK ಅನುಮತಿಗೆ ಕನಿಷ್ಠ 2 ರಿಂದ 4 ಗಂಟೆ ಕಾಯಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಬಿಜೆಪಿ ಆತಂಕ ವ್ಯಕ್ತ ಪಡಿಸಿದೆ.

- Advertisement - 

ವೈದ್ಯರು MRI ಮತ್ತು ಸಿಟಿ ಸ್ಕ್ಯಾನ್​ ತಪಾಸಣೆ ಸೂಚಿಸಿದರೂ ಸಕಾಲಕ್ಕೆ ಸ್ಕ್ಯಾನಿಂಗ್ ಆಗದೇ ರೋಗಿಗಳ ನರಳಾಡುತ್ತಿದ್ದಾರೆ. ಪ್ರಾಣ ಭಯದಿಂದ ಬಡ ರೋಗಿಗಳು ಸಾಲ ಮಾಡಿ ಹಣ ಕೊಟ್ಟು ಖಾಸಗಿಯಲ್ಲಿ ಸ್ಕ್ಯಾನಿಂಗ್ ಮಾಡಿಸುತ್ತಿದ್ದಾರೆ. ಬಿಪಿಎಲ್​, ಅಂತ್ಯೋದಯ ಕಾರ್ಡ್ ಇದ್ದರೂ ಸಾವಿರಾರು ಹಣ ಕಟ್ಟುವ ಸ್ಥಿತಿ ನಿರ್ಮಾಣವಾಗಿದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.

ರಾಜ್ಯ ಸರ್ಕಾರ ಈ ಕೂಡಲೇ ಈ ನಿಯಮಗಳನ್ನು ರದ್ದುಗೊಳಿಸಿ ಬಡವರ ಹಿತಕಾಯುವ ಸಂವೇದನೆ ತೋರಿಸಬೇಕು ಎಂದು ಬಿಜೆಪಿ ಆಗ್ರಹ ಮಾಡಿದೆ.

- Advertisement - 

 

 

 

Share This Article
error: Content is protected !!
";