Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅನುಮತಿ ಇಲ್ಲದ ಫ್ಲೆಕ್ಸ್, ಬ್ಯಾನರ್ ತೆರವಿಗೆ ನಗರಸಭೆ ಗಡುವು–ವಾಸೀಂ ಎಚ್ಚರಿಕೆ

Advertisement

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ನಗರದ ಸೌಂದರ್ಯಕ್ಕೆ ಧಕ್ಕೆ ತರುತ್ತಿರುವ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಅಪಾಯಕಾರಿಯಾಗಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳ ವಿರುದ್ಧ ಹಿರಿಯೂರು ನಗರಸಭೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ನಗರಸಭೆ ವ್ಯಾಪ್ತಿಯಲ್ಲಿ ಅನುಮತಿ ಪಡೆಯದೆ ಅಳವಡಿಸಲಾಗಿರುವ ಎಲ್ಲಾ ರೀತಿಯ ಪ್ರಚಾರ ಸಾಮಗ್ರಿಗಳನ್ನು 7 ದಿನದೊಳಗಾಗಿ ತೆರವುಗೊಳಿಸುವಂತೆ ಪೌರಾಯುಕ್ತ ಎ.ವಾಸೀಂ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ಜವಾಬ್ದಾರಿ ನಿಮ್ಮದೇ: ಗಾಳಿ-ಮಳೆಯಿಂದಾಗಿ ಬ್ಯಾನರ್‌ಗಳು ಬಿದ್ದು ವಾಹನ ಸವಾರರಿಗೆ ಅಥವಾ ಸಾರ್ವಜನಿಕರಿಗೆ ಯಾವುದೇ ಅನಾಹುತ ಸಂಭವಿಸಿದಲ್ಲಿ, ಅದಕ್ಕೆ ಸಂಬಂಧಪಟ್ಟ ಕಟ್ಟಡ ಮಾಲೀಕರು ಮತ್ತು ಬ್ಯಾನರ್ ಅಳವಡಿಸಿದವರೇ ನೇರ ಜವಾಬ್ದಾರರಾಗಿರುತ್ತಾರೆ. ನಗರಸಭೆಗೂ ಇದಕ್ಕೂ ಯಾವುದೇ ಸಂಬಂಧವಿರುವುದಿಲ್ಲ.

ನಿಯಮಾನುಸಾರ ಅನುಮತಿ ಕಡ್ಡಾಯ: ಇನ್ನು ಮುಂದೆ ಬ್ಯಾನರ್ ಅಥವಾ ಹೋರ್ಡಿಂಗ್‌ಗಳನ್ನು ಅಳವಡಿಸುವ ಮುನ್ನ ನಗರಸಭೆಯಿಂದ ಕಡ್ಡಾಯವಾಗಿ ಸ್ಥಳದ ಅನುಮತಿ ಪಡೆಯಬೇಕು ಮತ್ತು ನಿಗದಿತ ಶುಲ್ಕವನ್ನು ಪಾವತಿಸಬೇಕು.

ಕಾನೂನು ಕ್ರಮ: ಈ ಆದೇಶವು Prevention of Disfigurement Act 1981 ಮತ್ತು 2026ರ ಕರ್ನಾಟಕ ಅಧಿನಿಯಮದ ಸುತ್ತೋಲೆಗಳ ಅನ್ವಯ ಜಾರಿಯಲ್ಲಿದೆ. ಸೂಚನೆ ಮೀರಿದವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೌರಾಯುಕ್ತ ಎ.ವಾಸೀಂ ಎಚ್ಚರಿಸಿದ್ದಾರೆ.

ತಪ್ಪಿದಲ್ಲಿ ದಂಡದ ಬಿಸಿ:
ಒಂದು ವೇಳೆ ಏಳು ದಿನಗಳ ಒಳಗೆ ಮಾಲೀಕರು ತಾವಾಗಿಯೇ ಬ್ಯಾನರ್‌ಗಳನ್ನು ತೆರವುಗೊಳಿಸದಿದ್ದರೆ
, ನಗರಸಭೆಯೇ ಅವುಗಳನ್ನು ತೆರವುಗೊಳಿಸಲಿದೆ. ಈ ತೆರವು ಕಾರ್ಯಾಚರಣೆಯ ವೆಚ್ಚ ಮತ್ತು ಬಾಕಿ ಇರುವ ದಂಡದ ಮೊತ್ತವನ್ನು ಕಟ್ಟಡ ಮಾಲೀಕರಿಂದಲೇ ಕಂದಾಯ ರೂಪದಲ್ಲಿ ವಸೂಲಿ ಮಾಡಲಾಗುವುದು ಎಂದು ಪೌರಾಯುಕ್ತ ಎ.ವಾಸೀಂ ಎಚ್ಚರಿಸಿದ್ದಾರೆ.
ನಗರದ ಸುಗಮ ಸಂಚಾರ ಮತ್ತು ಸಾರ್ವಜನಿಕ ಹಿತದೃಷ್ಟಿಯಿಂದ ಪ್ರತಿಯೊಬ್ಬರೂ ಈ ನಿಯಮವನ್ನು ಪಾಲಿಸಬೇಕೆಂದು ನಗರಸಭೆ ಮನವಿ ಮಾಡಿದೆ.

 

Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST