ಪಾಲಿಕೆ ಅಧಿಕಾರಿಗಳ ಬೆಂಗಳೂರು ಚಲೋ, ಕೆಲಸ ಸ್ಥಗಿತ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ರಾಜ್ಯದ ಪಾಲಿಕೆಗಳ ಬಂದ್​ಗೆ ಕರೆ ನೀಡಿರುವ ಮೇರೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಬಂದ್​ಗೆ ಬೆಂಬಲ ವ್ಯಕ್ತಪಡಿಸಿ ಕೆಲಸಕ್ಕೆ ರಜೆ ಹಾಕಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಬೆಳಗ್ಗೆಯೇ ಎಂಟು ಬಸ್​ಗಳಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ದಾವಣಗೆರೆ ಮಹಾ ನಗರಪಾಲಿಕೆಯ ಎಇ, ಎಇಇ, ಜೆಇ, ಆರೋಗ್ಯ ನಿರೀಕ್ಷಕರು, ಕಂದಾಯ ಪರಿಶೀಲಕರು ಸೇರಿ 340ಕ್ಕೂ ಹೆಚ್ಚು ಸಿಬ್ಬಂದಿ ಸಾಮೂಹಿಕ ರಜೆ ಹಾಕಿ ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ.

- Advertisement - 

ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಧರಣಿ ಕುಳಿತಿದ್ದಾರೆ. ಏಳನೇ ವೇತನ ಆಯೋಗ ಜಾರಿ ಮಾಡಿದ ಸರ್ಕಾರ, ಆ ಆಯೋಗದ ಹಣವನ್ನು ಪಾಲಿಕೆ ಸಿಬ್ಬಂದಿಗೆ ನೀಡಲು ನಿರಾಕರಣೆ ಮಾಡಿದ್ದಕ್ಕಾಗಿ ಈ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಪಾಲಿಕೆ ಸಿಬ್ಬಂದಿ ಹಾಗೂ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು ತಿಳಿಸಿದರು.ಎಲ್ಲಾ ಸಿಬ್ಬಂದಿ ಬೆಂಗಳೂರಿಗೆ ತೆರಳಿದ್ದರಿಂದ ಪಾಲಿಕೆಯಲ್ಲಿ ಒಂದು ದಿನ ಆಡಳಿತ ಯಂತ್ರ ಸ್ಥಗಿತವಾಗಿದೆ.

 

- Advertisement - 

Share This Article
error: Content is protected !!
";