ಕನ್ನಡ ಬೆಳ್ಳಿತೆರೆಗೆ ಅಪಾರ ಕಾಣಿಕೆ ನೀಡಿರುವ ಸರೋಜಾದೇವಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಶ್ರೀಮತಿ ಬಿ.ಸರೋಜಾದೇವಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

- Advertisement - 

ಮೇರುನಟರಾದ ಡಾ. ರಾಜ್ ಕುಮಾರ್ ಅವರು ಸೇರಿದಂತೆ ಭಾರತದ ಎಲ್ಲಾ ಭಾಷೆಗಳ ದಿಗ್ಗಜ ನಾಯಕ ನಟರೆಲ್ಲರ ಜತೆ ನಟಿಸಿದ್ದ ಸರೋಜಾದೇವಿ ಅವರು, ಅಭಿಮಾನಿಗಳ ಪಾಲಿಗೆ ಅಭಿನಯ ಸರಸ್ವತಿ ಆಗಿದ್ದರು. ಅವರ ಅನನ್ಯ ಅಭಿನಯ ನಮ್ಮೆಲ್ಲರನ್ನೂ ಮಂತ್ರಮುಗ್ಧರನ್ನಾಗಿ ಮಾಡುತ್ತಿತ್ತು.

- Advertisement - 

ಕನ್ನಡ ಬೆಳ್ಳಿತೆರೆಯನ್ನು ಶ್ರೀಮಂತಗೊಳಿಸುವಲ್ಲಿ ಅಪಾರ ಕಾಣಿಕೆ ನೀಡಿರುವ ಅವರು; ಕಿತ್ತೂರು ಚೆನ್ನಮ್ಮ, ಬಬ್ರುವಾಹನ ಸೇರಿದಂತೆ 200ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಅವರ ಅಗಲಿಕೆ ಚಿತ್ರರಂಗಕ್ಕೆ, ನಾಡಿಗೆ ಬಹುದೊಡ್ಡ ನಷ್ಟ.

ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಕರುಣಿಸಲಿ ಎಂದು ಕುಮಾರಸ್ವಾಮಿ ಪ್ರಾರ್ಥಿಸಿದ್ದಾರೆ.

- Advertisement - 

 

Share This Article
error: Content is protected !!
";