ಕನಕ ಗೌರವ ಮತ್ತು ಕನಕ ಯುವ ಪುರಸ್ಕಾರಕ್ಕೆ ಆಯ್ಕೆ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂತಕವಿ ಕನಕದಾಸ ಮತ್ತು ತತ್ವಪದ ಅಧ್ಯಯನ ಕೇಂದ್ರದಿಂದ ವಾರ್ಷಿಕವಾಗಿ ಕೊಡಮಾಡುವ ಕನಕ ಗೌರವ ಮತ್ತು ಕನಕ ಯುವ ಪುರಸ್ಕಾರಕ್ಕೆ ನಾಲ್ಕು ವರ್ಷಗಳ ಅವಧಿಗೆ ಪರಿಣಿತರ ಆಯ್ಕೆ ಸಮಿತಿಯು ಆಯ್ಕೆ ಮಾಡಿದೆ.

- Advertisement - 

2021-22 ನೇ ಸಾಲಿನ ಕನಕಗೌರವ ಪುರಸ್ಕಾರಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪ್ರೊ. ತಾಳ್ತಜೆ ವಸಂತಕುಮಾರ್, 2022-23 ನೇ ಸಾಲಿಗೆ ಹಾವೇರಿಯ ಡಾ.ನೀಲಪ್ಪ ಮೈಲಾರಪ್ಪ ಅಂಬಲಿಯವರ, 2023-24 ನೇ ಸಾಲಿಗೆ ಬೆಂಗಳೂರಿನ ಡಾ.ಎಚ್.ಎನ್. ಮುರಳೀಧರ, 2024-25 ನೇ ಸಾಲಿಗೆ ತುಮಕೂರಿನ ಡಾ. ಜಿ.ವಿ. ಆನಂದಮೂರ್ತಿ ಅವರನ್ನು ಆಯ್ಕೆ ಮಾಡಲಾಗಿದೆ.

- Advertisement - 

2021-22 ನೇ ಸಾಲಿನ ಕನಕ ಯುವ ಪುರಸ್ಕಾರಕ್ಕೆ ಮೈಸೂರಿನ ಡಾ.ಅನಿಲ್‍ಕುಮಾರ್,  2022-23 ನೇ ಸಾಲಿಗೆ ಚಿಕ್ಕಮಗಳೂರಿನ ಡಾ.ಚಿಕ್ಕಮಗಳೂರು ಗಣೇಶ್, 2023-24 ನೇ ಸಾಲಿಗೆ ವಿಜಯನಗರ ಜಿಲ್ಲೆಯ ಡಾ.ಉಮೇಶ .ಎಂ (ಉಬಾಮ), 2024-25 ನೇ ಸಾಲಿಗೆ ಅರ್ಹ ಯುವ ಪುರಸ್ಕøತರು ಅಲಭ್ಯವಾಗಿರುವುದರಿಂದ ಆಯ್ಕೆ ಮಾಡಿರುವುದಿಲ್ಲ.

ಕನಕ ಗೌರವ ಪುರಸ್ಕಾರವನ್ನು 50 ವರ್ಷಕ್ಕೂ ಮೇಲ್ಪಟ್ಟ ಹಿರಿಯ ವಿದ್ವಾಂಸರಿಗೆ ಕನಕ ಗೌರವ ಪುರಸ್ಕಾರವನ್ನು ನೀಡಲಾಗುತ್ತದೆ. ಈ ಪುರಸ್ಕಾರದ ಮೊತ್ತ ರೂ.75,000/-ಗಳು. ಇದರೊಂದಿಗೆ ಪ್ರಶಸ್ತಿ ಪುತ್ಥಳಿ, ಪ್ರಶಸ್ತಿ ಫಲಕ, ಶಾಲು, ಫಲತಾಂಬೂಲವನ್ನು ನೀಡಲಾಗುತ್ತದೆ. ಈಗಾಗಲೇ ಕನಕದಾಸರ ಬಗ್ಗೆ ಆಳವಾದ ಅಧ್ಯಯನ ಮಾಡಿ ಪ್ರಕಟಣೆಗಳನ್ನು ಹೊರತಂದಿರುವ ಹಿರಿಯ ವಿದ್ವಾಂಸರನ್ನು ಪುರಸ್ಕಾರಕ್ಕೆ ಪರಿಗಣಿಸಲಾಗುತ್ತದೆ.

- Advertisement - 

ಕನಕ ಯುವ ಪುರಸ್ಕಾರವನ್ನು 40 ವರ್ಷದೊಳಗಿನ ಕಿರಿಯ ವಿದ್ವಾಂಸರಿಗೆ ಕನಕ ಯುವ ಪುರಸ್ಕಾರವನ್ನು ನೀಡಲಾಗುತ್ತದೆ. ಈ ಪ್ರಶಸ್ತಿಯ ಮೊತ್ತ ರೂ.50,000/-ಗಳು. ಇದರೊಂದಿಗೆ ಪ್ರಶಸ್ತಿ ಪುತ್ಥಳಿ, ಪ್ರಶಸ್ತಿ ಫಲಕ, ಶಾಲು, ಫಲತಾಂಬೂಲವನ್ನು ನೀಡಲಾಗುತ್ತದೆ.

ಕನಕದಾಸರ ಬಗ್ಗೆ ಅಧ್ಯಯನ ಪೂರ್ಣ ಅಭ್ಯಾಸ ಮಾಡುತ್ತಿರುವ ಪ್ರಕಟಣೆಗಳನ್ನು ಹೊರತರುತ್ತಿರುವ, ಕನಕದಾಸರ ಸಾಹಿತ್ಯ – ಸಂದೇಶಗಳನ್ನು ಪ್ರಚಾರ ಮಾಡುತ್ತಿರುವ ಯುವ ವಿದ್ವಾಂಸರನ್ನು ಕನಕ ಯುವ ಪುರಸ್ಕಾರಕ್ಕೆ ಪರಿಗಣಿಸಲಾಗುತ್ತದೆ ಎಂದು ಬೆಂಗಳೂರಿನ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಕಾ.ತ. ಚಿಕ್ಕಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";