ರೌಡಿಶೀಟರ್‌ಗಳ ಪರೇಡ್ ನಡೆಸಿದ ಎಸ್ಪಿ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ನಗರದ ಡಿಆರ್ ಮೈದಾನದಲ್ಲಿ ಎಸ್ಪಿ ಉಮಾ ಪ್ರಶಾಂತ್ ಅವರು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಶೀಟರ್‌ಗಳ ಪರೇಡ್ ನಡೆಸಿದರು.
ನಗರದ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯ
150ಕ್ಕೂ ಹೆಚ್ಚು ರೌಡಿಶೀಟರ್​ಗಳು ಪರೇಡ್​ನಲ್ಲಿದ್ದರು.

- Advertisement - 

ರೌಡಿಶೀಟರ್​ಗಳು ಯಾವುದೇ ಕಾರಣಕ್ಕೂ ಜಿಲ್ಲೆಯ ಅಪರಾಧ ಕೃತ್ಯಗಳಲ್ಲಿ, ಅನಗತ್ಯ ವ್ಯವಹಾರಗಳಲ್ಲಿ ಭಾಗಿಯಾಗಬಾರದು ಎಂದು ಎಸ್ಪಿ ಎಚ್ಚರಿಕೆ ನೀಡಿದರು.
ಕೆಟ್ಟ ಅವತಾರಗಳಲ್ಲಿದ್ದ ರೌಡಿಶೀಟರ್​ಗಳಿಗೆ ಕೂದಲು ಕಟ್​ ಮಾಡಿಸಿಕೊಳ್ಳುವಂತೆ ಎಸ್ಪಿ ಖಡಕ್ ಸೂಚನೆ ನೀಡಿದರು.‌

- Advertisement - 

ಕಾಂಗ್ರೆಸ್ ಪಕ್ಷದ 28ನೇ ವಾರ್ಡ್ ನಗರ ಪಾಲಿಕೆ ಸದಸ್ಯ ಜೆ.ಎನ್.ಶ್ರೀನಿವಾಸ್ ಅಲಿಯಾಸ್ ಮೋಟ್ ಬಳ್ಳು ಸೀನಾ ಕೂಡ ಈ ಪರೇಡ್​ನಲ್ಲಿ ಭಾಗವಹಿಸಿದ್ದರು. ನಿಮ್ಮ ಮೇಲೆ ಕೊಲೆ ಕೇಸ್ ಇದೆ. ಬುಳ್ ನಾಗ ವಿಚಾರವಾಗಿ ಹಲವು ಕೇಸ್​ಗಳಿವೆ. ಮತ್ತೆ ರೌಡಿಗಳನ್ನು ಕೂಡಿಸಿಕೊಂಡು ಏನಾದರೂ ಮಾಡಿದ್ರೆ ಮತ್ತೆ ಕೇಸ್ ಹಾಕುತ್ತೇವೆ ಎಂದು ನೇರವಾಗಿ ಕಾರ್ಪೋರೇಟರ್ ಸೇರಿದಂತೆ ಇತರೆ ರೌಡಿಗಳಿಗೆ ಎಸ್ಪಿ ಎಚ್ಚರಿಕೆ ನೀಡಿ ಬೆವರಿಳಿಸಿದರು.
ಸಮಾಜದಲ್ಲಿ ಒಳ್ಳೆಯ ವ್ಯಕ್ತಿಗಳಾಗಿ ಬದುಕಿ
, ಇಲ್ಲವಾದಲ್ಲಿ ಜೀವನಪೂರ್ತಿ ರೌಡಿಶೀಟರ್ ಕೇಸ್ ನಿಮ್ಮ ಮೇಲಿರುತ್ತದೆ. ಸಮಾಜಸೇವೆ ಮಾಡುವ ನೆಪದಲ್ಲಿ ಜನರನ್ನು ಹೆದರಿಸಿದರೆ ರೌಡಿಶೀಟರ್ ಕೇಸ್ ಹಾಕುತ್ತೇವೆ ಎಂದು ಉಮಾ ಪ್ರಶಾಂತ್ ಎಚ್ಚರಿಸಿದರು.‌

ರೌಡಿಶೀಟರ್​ಗಳ ಮೇಲೆ ನಿಗಾ ಇರಿಸಲು ಈ ಪರೇಡ್ ಮಾಡಿದ್ದೇವೆ. ಒಟ್ಟು 150 ರೌಡಿಶೀಟರ್​ಗಳು ಭಾಗಿಯಾಗಿದ್ದರು. ಅಪರಾಧದಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದೇವೆ. ಕೆಲವರು ಈ ಕೆಲಸಗಳನ್ನು ಬಿಟ್ಟು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಅಂತಹವರ ಕೇಸ್​ಗಳನ್ನು ಮುಚ್ಚುತ್ತೇವೆ. ಯಾರು ಅಪರಾಧ ಪ್ರಕರಣಗಳಲ್ಲಿ ಸಕ್ರಿಯರಾಗಿದ್ದಾರೋ, ಅವರನ್ನು ಎಚ್ಚರಿಸುವ ಕೆಲಸ ಮಾಡಿದ್ದೇವೆ. ಅನಧಿಕೃತ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ವಾರ್ನ್ ಮಾಡಿದ್ದೇವೆ. ಅಲ್ಲದೇ ಮತೀಯ ಗಲಭೆಗಳಲ್ಲಿ ಭಾಗಿಯಾದವರೂ ಕೂಡ ಪರೇಡ್​ಗೆ ಹಾಜರಾಗಿದ್ದರು. ನೈತಿಕ ಪೊಲೀಸ್​ಗಿರಿ ಮಾಡದಂತೆ ನಿಗಾ ವಹಿಸಿದ್ದೇವೆ ಎಂದು ಎಸ್ಪಿ ಉಮಾ ಪ್ರಶಾಂತ್ ಹೇಳಿದರು.

- Advertisement - 

 

 

Share This Article
error: Content is protected !!
";