ವಿದ್ಯಾರ್ಥಿ ವೇತನ ಹೆಚ್ಚಳ, ಹೋಬಳಿಗೊಂದು ವಸತಿ ಶಾಲೆ ಆರಂಭ-ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಮೈಸೂರು:
ವಿದ್ಯಾರ್ಥಿ ನಿಲಯಗಳಲ್ಲಿ ಪೌಷ್ಟಿಕ ಆಹಾರ ದೊರಕಿಸುವ ಉದ್ದೇಶದಿಂದ ಪ್ರೀಮೆಟ್ರಿಕ್ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಳ ಮಾಡಿದೆ. ಹೀಗೆ ಐದು ವರ್ಷವೂ ಕೂಡ  ವಿದ್ಯಾರ್ಥಿ ವೇತನವನ್ನು ಹಂತ ಹಂತವಾಗಿ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement - 

ಅವರು ಮೈಸೂರಿನಲ್ಲಿ ಮಾತನಾಡಿ 750 ರೂ ವಿದ್ಯಾರ್ಥಿ ವೇತನವನ್ನು 1750 ರೂ.ಗಳಿಗೆ ಹೆಚ್ಚಿಸಲಾಗಿದೆ. ಹಾಸ್ಟೆಲ್ ಗಳಲ್ಲಿ  ಇರುವ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರ ಲಭಿಸಿದಾಗ ಮಾತ್ರ ಉತ್ತಮ ಜ್ಞಾನಾರ್ಜನೆ ಮಾಡಲು ಸಾಧ್ಯ. 2024-25 ರಲ್ಲಿಯೂ ಕೂಡ ವಿದ್ಯಾರ್ಥಿ ವೇತನವನ್ನು 1850 ರೂ.ಗಳಿಗೆ ಪುನ: ಹೆಚ್ಚಿಸಲಾಗಿದೆ ಎಂದು ವಿವರಿಸಿದರು.

- Advertisement - 

 ಪ್ರತಿ ಹೋಬಳಿಗೊಂದು ವಸತಿ ಶಾಲೆ ಗುರಿ ಸಾಧಿಸಲು ಬದ್ಧ-
ನಾನು ಹಣಕಾಸು ಮಂತ್ರಿಯಾಗಿದ್ದಾಗ , ದಲಿತ ಸಂಘರ್ಷ ಸಮಿತಿಯವರು ಸಾರಾಯಿ ಅಂಗಡಿ ಬೇಡ, ಮಕ್ಕಳಿಗೆ ವಸತಿ ಶಾಲೆ ನಿರ್ಮಾಣವಾಗಬೇಕೆಂಬ ಬೇಡಿಕೆಯನ್ನಾಧರಿಸಿ, 1994-95 ರಲ್ಲಿ  ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ಪ್ರಾರಂಭಿಸಲಾಯಿತು. ಹೋಬಳಿಗೊಂದು ವಸತಿ ಶಾಲೆ ಯೋಜನೆಯಂತೆ ರಾಜ್ಯದಲ್ಲಿ ಒಟ್ಟು 822 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ.

  ಈ ವರ್ಷ 20 ವಸತಿ ಶಾಲೆ ನಿರ್ಮಿಸಲು ತೀರ್ಮಾನಿಸಲಾಗಿದೆ. ಹಳ್ಳಿಗಾಡಿನ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬ ಉದ್ದೇಶದಿಂದ ಮುಂದಿನ ವರ್ಷದೊಳಗೆ ಉಳಿದೆಲ್ಲ ಹೋಬಳಿಗಳಲ್ಲೂ ರಾಜ್ಯದ ಪ್ರತಿ ಹೋಬಳಿಯಲ್ಲಿ ಒಂದು ವಸತಿ ಶಾಲೆ ನಿರ್ಮಿಸುವ ಗುರಿಯನ್ನು ಸಾಧಿಸಬೇಕು.

- Advertisement - 

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಆದ್ದರಿಂದ ಹತ್ತನೆ ತರಗತಿಯಲ್ಲಿ ಓದುವ ಮಕ್ಕಳಿಗೆ ವಾರಕ್ಕೆ ಆರು ದಿನ ಮೊಟ್ಟೆ ನೀಡಲಾಗುತ್ತಿದೆ. ಅನ್ನಭಾಗ್ಯದಡಿ 5 ಕೆಜಿ ಅಕ್ಕಿ, ಕ್ಷೀರಭಾಗ್ಯ ಕಾರ್ಯಕ್ರಮ, ಬಡಮಕ್ಕಳಿಗೆ ಶೂ ಭಾಗ್ಯ ಸೇರಿದಂತೆ ಹಲವು ಜನಪರ ಯೋಜನೆ ಜಾರಿಗೆ ತರಲಾಗಿದೆ ಎಂದರು.

 

 

Share This Article
error: Content is protected !!
";