ಹರಕೆಯ ಕುರಿ ಮಾಡುತ್ತಿರುವ ಕೊಲೆಗಡುಕ ಕಾಂಗ್ರೆಸ್ ಸರ್ಕಾರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಕಾಲ್ತುಳಿತ ಪ್ರಕರಣದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ ಕರ್ನಾಟಕ ಕಾಂಗ್ರೆಸ್ 11 ಅಮಾಯಕ ಜನರ ಸಾವಿಗೆ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದ್ದಾರೆ.

- Advertisement - 

ಸ್ವಾಮಿ ಸಿಎಂ ಸಿದ್ದರಾಮಯ್ಯ ನವರೇ, ನಿಮ್ಮ ಮೊಮ್ಮಗನಿಗೆ ಕ್ರಿಕೆಟ್ ಆಟಗಾರರ ಜೊತೆ ಫೋಟೋಗ್ರಾಫ್ ಆಟೋಗ್ರಾಫ್ ತೆಗೆಸಿಕೂಡುವ ಭರದಲ್ಲಿ ಜನಸಾಮಾನ್ಯರ ಮನೆ ಮಕ್ಕಳನ್ನ ಕೊಂದು ಬಿಟ್ಟರಲ್ಲ ಸ್ವಾಮಿ, ನಿಮಗೆ ಆತ್ಮಸಾಕ್ಷಿ ಇದೆಯಾ? ಎಂದು ತೀಕ್ಷ್ಣವಾಗಿ ಅವರು ಪ್ರಶ್ನಿಸಿದ್ದಾರೆ.

- Advertisement - 

ನಿಮ್ಮ ಮೊಮ್ಮಗನಿಗೆ ವೇದಿಕೆಯ ಮೇಲೆ ಕುರ್ಚಿ, ಜನಸಾಮಾನ್ಯರಿಗೆ ಬೀದಿಯಲ್ಲಿ ಕಾಲ್ತುಳಿತ. ಆಹಾ, ಇನ್ನು ಮುಂದೆಂದೂ ಸಮಾಜವಾದ, ಸಾಮಾಜಿಕ ನ್ಯಾಯ ಎಂದು ಭಾಷಣ ಬಿಗಿದು ಆ ಪದಗಳಿಗೆ, ಸಿದ್ಧಾಂತಗಳಿಗೆ ಅಪಮಾನ ಮಾಡಬೇಡಿ ಎಂದು ಅಶೋಕ್ ಸಿದ್ದರಾಮಯ್ಯಗೆ ತರಾಟೆ ತೆಗೆದುಕೊಂಡಿದ್ದಾರೆ.

 

- Advertisement - 

 

Share This Article
error: Content is protected !!
";