ನೂತನ ಮಾದರಿಯ “ರೈತ ಸಂತೆ”, “ಮಾವು ಹಾಗೂ ಹಲಸಿನ ಹಣ್ಣಿನ ಮೇಳ”

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಜಿ.ಕೆ.ವಿ.ಕೆ ಆವರಣದಲ್ಲಿ 2025 ನೇ ಮೇ 24 ರಂದು ಬೆಳಿಗ್ಗೆ 7.00 ಗಂಟೆಯಿಂದ ಸಂಜೆ 4.00 ಗಂಟೆಯ ವರೆಗೆ ನೂತನ ಮಾದರಿಯ ರೈತ ಸಂತೆಕಾರ್ಯಕ್ರಮದಡಿ ಮಾವು ಹಾಗೂ ಹಲಸಿನ ಹಣ್ಣಿನ ಮೇಳವನ್ನು ಆಯೋಜಿಸಲಾಗಿದೆ.

- Advertisement - 

ಮೇಳದಲ್ಲಿ ವಿವಿಧ ರೀತಿಯ ಮಾವಿನ ಹಣ್ಣು, ಹಲಸಿನ ಹಣ್ಣನ್ನು ಸಾರ್ವಜನಿಕರಿಗೆ ತಲುಪಿಸುವ ಹಾಗೂ ಕೃಷಿ ಸಂಬಂಧಿ ವಸ್ತುಗಳಿಗೆ ಒಂದೇ ಸೂರಿನಡಿ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶವನ್ನು ಹೊಂದಲಾಗಿದೆ. ಅಲ್ಲದೆ, ಕೃಷಿ ಉತ್ಪನ್ನ / ಪರಿಕರಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ.

- Advertisement - 

ಬಿತ್ತನೆ ಬೀಜಗಳು, ಸಿರಿಧಾನ್ಯಗಳ ಮೌಲ್ಯವರ್ಧಿತ ಉತ್ಪನ್ನಗಳು, ಸಾವಯವ ಉತ್ಪನ್ನಗಳು, ತೋಟಗಾರಿಕೆ ಹಣ್ಣುಗಳು, ಸುಗಂಧ ಮತ್ತು ಔಷಧೀಯ ಸಸ್ಯಗಳು, ಜೈವಿಕ ಗೊಬ್ಬರಗಳು, ಕೃಷಿ ಯಂತ್ರೋಪಕರಣಗಳು, ಎರೆಹುಳು ಗೊಬ್ಬರ, ಸಸ್ಯ ಸಂರಕ್ಷಣೆ: ಜೈವಿಕ ಕೀಟನಾಶಕಗಳು, ಗುಣಮಟ್ಟದ ಪದಾರ್ಥಗಳು / ಪರಿಕರಗಳು, ಕರಕುಶಲ ವಸ್ತುಗಳು: ಗವ್ಯೋತ್ಪನ್ನಗಳು, ಅಡಿಕೆ ಉತ್ಪನ್ನಗಳು,

ರೇಷ್ಮೆ ಕೃಷಿಯ ಉಪ ಉತ್ಪನ್ನಗಳು, ಅಣಬೆ, ಜೇನು ಕೃಷಿ ವಾಣಿಜ್ಯೀಕರಣ ಉತ್ಪನ್ನಗಳು, ಪಶು ಸಂಗೋಪನೆ, ಕೃಷಿ ಪ್ರಕಟಣೆಗಳು, ವಿಶ್ವವಿದ್ಯಾನಿಲಯದ ಬಗ್ಗೆ ಮಾಹಿತಿ, ತಾರಸಿ ಕೈತೋಟ / ನಗರ ತೋಟಗಾರಿಕೆ ಇನ್ನು ಮುಂತಾದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟದ ವ್ಯವಸ್ಥೆಯಿರುತ್ತದೆ.
ಸಾರ್ವಜನಿಕರು ಮತ್ತು ರೈತರು ವಿನೂತನ ರೈತ ಸಂತೆಯ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement - 

 

Share This Article
error: Content is protected !!
";