ಕನ್ನಡ ಮಾತನಾಡಿದ ಶಿಕ್ಷಕನ ರಾಜೀನಾಮೆ ಪಡೆದ ಘಟನೆ ಅಕ್ಷಮ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ನಾಡು ನುಡಿಯ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.

- Advertisement - 

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಕನ್ನಡ ಭಾಷೆ ಎನ್ನುವುದು ಕೇವಲ‌ ಒಂದು ಭಾಷೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ನಿರಂತರವಾಗಿ ಕನ್ನಡ ಭಾಷೆಗೆ ದ್ರೋಹ ಎಸಗುವ ಘಟನೆಗಳು ಜರುಗುತ್ತಿದೆ.

- Advertisement - 

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಮಾತನಾಡಿದ ಶಿಕ್ಷಕನ ರಾಜೀನಾಮೆ ಪಡೆದಿರುವ ಘಟನೆ ಅಕ್ಷಮ್ಯ. ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳದೇ ಇರುವುದರಿಂದ ಈ ರೀತಿಯ ಘಟನೆಗಳು ಇತ್ತೀಚೆಗೆ ಸಾಮಾನ್ಯವಾಗಿದೆ.

ವಿಪಕ್ಷದಲ್ಲಿದ್ದಾಗ ಭಾಷೆಯ ಕುರಿತು ಭಾವನಾತ್ಮಕವಾಗಿ ಮಾತನಾಡಿದ್ದ ಕರ್ನಾಟಕ ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದ ಕೂಡಲೇ ವರಸೆ ಬದಲಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ನಿರಂತರವಾಗಿ ತನ್ನ ಭಾಷಾ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ದೂರಿದೆ.

- Advertisement - 

 

Share This Article
error: Content is protected !!
";