ರಾಜ್ಯದ ಜನರನ್ನು ಸಂಕಷ್ಟಕ್ಕೆ ದೂಡಿರುವ ಕಾಂಗ್ರೆಸ್ ಸರ್ಕಾರವನ್ನು ವಿಸರ್ಜಿಸಬಾರದೇಕೆ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜನರ ಆಶಯಗಳಿಗೆ ಪೂರಕವಾಗಿ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸತ್ಯಾಂಶವನ್ನು ಭಾರತೀಯ ಕಾಂಗ್ರೆಸ್ ಪಾರ್ಟಿಯ ಹೈಕಮಾಂಡ್ ಕೂಡಾ ಒಪ್ಪಿಕೊಂಡಿದೆ. ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪುತ್ತಿಲ್ಲ, ಹೆಸರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು ಎಂಬಂತಾಗಿದೆ ಎಂದು ಬಿಜೆಪಿ ದೂರಿದೆ.

- Advertisement - 

ಸಚಿವರ ನಿಷ್ಕ್ರಿಯತೆಯನ್ನು ಮುಂದಿಟ್ಟುಕೊಂಡು ಸಿದ್ದರಾಮಯ್ಯ ಸಂಪುಟಕ್ಕೆ ಸರ್ಜರಿ ಮಾಡಲು ಮುಂದಾಗಿರುವುದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಸಚಿವರು, ಕಾಂಗ್ರೆಸ್‌ ಶಾಸಕರಲ್ಲೇ ಅಸಮಾಧಾನವಿದೆ ಎಂದು ಬಿಜೆಪಿ ದೂರಿದೆ.

- Advertisement - 

ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಿರೀಕ್ಷಿತ ಪ್ರಮಾಣದಲ್ಲಿ ನಡೆಯುತ್ತಿಲ್ಲ. ಇಷ್ಟೆಲ್ಲಾ ಅಸಮಾಧಾನ, ನಿಷ್ಕ್ರಿಯತೆ ಹೊಂದಿರುವ, ರಾಜ್ಯದ ಜನತೆಯನ್ನು ಸಂಕಷ್ಟಕ್ಕೆ ದೂಡಿರುವ ಈ ಸರ್ಕಾರವನ್ನು ವಿಸರ್ಜಿಸಬಾರದೇಕೆ? ಎಂದು ಬಿಜೆಪಿ ಪ್ರಶ್ನಿಸಿದೆ.

 

- Advertisement - 

Share This Article
error: Content is protected !!
";