ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ನಗರದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ 10 ಲಕ್ಷ ರೂಪಾಯಿಗಳ ದೇಣಿಗೆ ನೀಡಲಾಗುವುದು ಎಂದು ಶಾಸಕ ಧೀರಜ್ ಮುನಿರಾಜು ಹೇಳಿದರು.
ಕೆಂಪೇಗೌಡ ಜಯಂತ್ಯೋತ್ಸವ ಆಚರಣಾ ಸಮಿತಿ ವತಿಯಿಂದ ನಗರದ ಒಕ್ಕಲಿಗರ ಸಮುದಯ ಭವನದಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡರ 516ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಬಸವಭವನದ ಡೈರಿ ಸಮೀಪದಲ್ಲಿ ಕೆಂಪೇಗೌಡರ ಪ್ರತಿಮೆ ನಿರ್ಮಾಣಕ್ಕೆ ಸೂಚಿಸಿರುವ ಜಾಗ ಶಿಕ್ಷಣ ಟ್ರಸ್ಟ್ ಗೆ ಸೇರಿದೆ. ಪ್ರತಿಮೆ ನಿರ್ಮಾಣಕ್ಕೆ ಸೂಕ್ತ ಜಾಗ ನೀಡಲು ಸರ್ಕಾರಕ್ಕೆ ಮನವಿ ಮಾಡಲಾಗುವುದು. ಇದರೊಂದಿಗೆ ಪ್ರತಿಮೆ ನೆರವಿಗೆ ಶಾಸಕರ ಅನುದಾನ ಹಾಗೂ ವೈಯಕ್ತಿಕವಾಗಿ 10 ಲಕ್ಷ ರೂಪಾಯಿಗಳನ್ನ ನೀಡಲಾಗುವುದು ಎಂದರು.
ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಕೆಂಪೇಗೌಡರ ಪರಿಶ್ರಮದಿಂದಾಗಿ ಬೆಂಗಳೂರು ನಗರ ವಿಶ್ವದಲ್ಲೇ ಹೆಸರು ಮಾಡಲು ಸಹಕಾರಿಯಾಗಿದೆ ಎಂದರು.
ಮೆರವಣಿಗೆ-
ನಗರದ ನೆಲದಾಂಜನೇಯಸ್ವಾಮಿ ದೇವಾಲಯದ ಬಳಿಯಿಂದ ರಾಮೇಗೌಡ ವೃತ್ತದ ಮೂಲಕ ಒಕ್ಕಲಿಗರ ಭವನದದವರೆಗೆ ನಗರದ ಪ್ರಮುಖ ಬೀದಿಗಳಲ್ಲಿ ಕೆಂಪೇಗೌಡರ ಪ್ರತಿಮೆಯನ್ನ ವಿವಿಧ ಕಲಾತಂಡಗಳೊಡನೆ ಮೆರವಣಿಗೆಗೆ ನಡೆಯಿತು.
ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷೆ ಹಾಗೂ ತಹಶೀಲ್ದಾರ್ ವಿಭಾ ವಿದ್ಯಾ ರಾಥೋಡ್ ಮೆರವಣಿಗೆಗೆ ಚಾಲನೆ ನೀಡಿದರು.
ಇದೇ ವೇದಿಕೆಯಲ್ಲಿ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಕ್ಕೂ ಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ವಿ.ಕೃಷ್ಣಪ್ಪ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆನಂದ್, ಕೆಂಪೇಗೌಡ ಜಯಂತ್ಯೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಟಿ.ವಿ.ಲಕ್ಷ್ಮೀನಾರಾಯಣ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಚುಂಚೇಗೌಡ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ, ಕೇಂದ್ರ ರೇಷ್ಮೆ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ಹಿರಿಯ ಮುಖಂಡ ಎ.ನರಸಿಂಹಯ್ಯ,
ನಗರಸಭಾ ಸದಸ್ಯರಾದ ಬಂತಿವೆಂಕಟೇಶ್, ಮುಖಂಡರಾದ , ಬಿ.ಸಿ.ವೆಂಕಟೇಶ್,ಬಿ.ಸಿ.ನಾರಾಯಣಸ್ವಾಮಿ, ಚಿಕ್ಕರಾಮ ಕೃಷ್ಣಪ್ಪ, ತಿ.ರಂಗರಾಜು, ಜಗದೀಶರೆಡ್ಡಿ, ಬೈರೇಗೌಡ, ಕೆಂಪೇಗೌಡ ಜಿಲ್ಲಾ ಮಹಿಳಾ ಒಕ್ಕಲಿಗರ ಸಂಘದ ಜಿಲ್ಲಾ ಅಧ್ಯಕ್ಷೆ ಶಾಂತಮ್ಮ, ಗೌರವ ಅಧ್ಯಕ್ಷೆ ರೇವತಿ, ಕಾರ್ಯದರ್ಶಿ ಡಿ.ಎನ್.ಲಕ್ಷ್ಮಮ್ಮ, ಖಜಾಂಚಿ ರತ್ನಮ್ಮ ಇದ್ದರು.