ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯ 2 ವರ್ಷಗಳ ಲೂಟಿ ಸಾಧನೆಗಳು

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೊಗಳೆ ಬಿಡುವ ಭರವಸೆಗಳು, ಖಜಾನೆ ಬರಿದು ಮಾಡುವ ಜಾಹೀರಾತುಗಳು. ಕೊಟ್ಟಿದ್ದು ತಲುಪುತ್ತಿಲ್ಲ, ಬಚ್ಚಿಟ್ಟಿದ್ದು ಇನ್ನೂ ಪತ್ತೆಯಾಗಿಲ್ಲ, ಕೊಳ್ಳೆಯೊಡೆಯುವುದು ಕೊನೆಯಾಗುತ್ತಿಲ್ಲ.

- Advertisement - 

ದುಬಾರಿ ಜೀವನ -ಅಭಿವೃದ್ಧಿ ಶೂನ್ಯ ಆಡಳಿತ, ಇದುವೇ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯ 2 ವರ್ಷಗಳ ಲೂಟಿ ಸಾಧನೆಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

- Advertisement - 

 ಮಿತಿಮೀರಿದ ಭ್ರಷ್ಟಾಚಾರ, ನಿರಂತರ ಬೆಲೆ ಏರಿಕೆ, ಏರುತ್ತಿರುವ ರೈತರ ಆತ್ಮಹತ್ಯೆಗಳು, ಸರಣೀ ಬಾಣಂತಿಯರ ಸಾವುಗಳು, ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳು, ನಿರಂತರ ಬೆದರಿಕೆಯಲ್ಲಿರುವ ಹಿಂದೂಗಳ ಜೀವನ, ಮೂಲಸೌಕರ್ಯಭಿವೃದ್ಧಿ ಮೂಲೆಗುಂಪು ಓಲೈಕೆ ರಾಜಕಾರಣಕ್ಕಾಗಿ ರಾಷ್ಟ್ರ ವಿರೋಧಿ ಶಕ್ತಿಗಳಿಗೆ ಬೆಂಬಲ, ನಿರುದ್ಯೋಗದ ತಾಂಡವ,

ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳು ಮತ್ತು ಆಶ್ವಾಸನೆಗಳು ಸಂಪೂರ್ಣ ವಿಫಲ. ಸ್ಥಗಿತಗೊಂಡ ಅಭಿವೃದ್ಧಿ ಪ್ರಧಾನ ಮಂತ್ರಿ-ಕಿಸಾನ್ ಸಮ್ಮಾನ್ ನಿಧಿ, ರೈತ ವಿದ್ಯಾನಿಧಿ ಮತ್ತು ಇತರ ರೈತ ಕಲ್ಯಾಣ ಯೋಜನೆಗಳ ರದ್ದು. ಬ್ರ್ಯಾಂಡ್ ಬೆಂಗಳೂರು ಬ್ಯಾಡ್ ಬೆಂಗಳೂರಾಯಿತು.

- Advertisement - 

ಗ್ರೇಟರ್ ಬೆಂಗಳೂರು ವಾಟರ್ ಬೆಂಗಳೂರು. ವಾರಂಟಿಯಿಲ್ಲದ ಗ್ಯಾರಂಟಿಗಳು. 2.5 ಲಕ್ಷ ಕೋಟಿ ರೂ ಸಾಲವೇ ಸಾಧನೆ. ಹೆಜ್ಜೆ ಇಡದ ಎರಡು ವರ್ಷ ಬೆಲೆ ಏರಿಕೆ-ಭ್ರಷ್ಟತೆಯ ಕರಾಳ ಸ್ಪರ್ಶ ಎಂದು ವಿಜಯೇಂದ್ರ ಹೇಳಿದ್ದಾರೆ.

 

Share This Article
error: Content is protected !!
";