ಪ್ರತೀ ತಾಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾ‌ರ್ ವಿದ್ಯುತ್ ಘಟಕ ಸ್ಥಾಪನೆ-ಡಿಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕುಸುಮ್ ಯೋಜನೆ ಮೂಲಕ ಪ್ರತೀ ತಾಲೂಕಿನಲ್ಲಿ
20 ಮೆ.ವ್ಯಾ ಸಾಮರ್ಥ್ಯದ ಸೋಲಾ‌ರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ, ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್‌ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.

ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್‌ಗೆ ಉಚಿತ ವಿದ್ಯುತ್‌ನೀಡಲಾಯಿತು.

2013ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್‌ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಇದೇ ವೇಳೆ ಡಿಸಿಎಂ ಶಿವಕುಮಾರ್ ತಿಳಿಸಿದ್ದಾರೆ.

 

 

Share This Article
error: Content is protected !!
";