![](https://www.chandravallinews.com/wp-content/uploads/2022/11/Govind-M-Karjol-1571050023.jpg)
i
ನವೆಂಬರ್-08ರಂದು ಜಲ ಸಂಪನ್ಮೂಲ ಸಚಿವರ ಜಿಲ್ಲಾ ಪ್ರವಾಸ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ರಾಜ್ಯ ಜಲ ಸಂಪನ್ಮೂಲ ಸಚಿವರಾದ ಗೋವಿಂದ ಎಂ.ಕಾರಜೋಳ ಅವರು ಇದೇ ನವಂಬರ್ 8ರಂದು ಒಂದು ದಿನ ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಸಂಜೆ 4.30ಕ್ಕೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲ್ಲೂಕು ಮೋಟೆಬೆನ್ನೂರು ಹೆಲಿಪ್ಯಾಡ್ನಿಂದ ಹೆಲೆಕಾಪ್ಟರ್ ಮೂಲಕ ಹೊರಟು, ಸಂಜೆ 5.10ಕ್ಕೆ ಹೊಸದುರ್ಗ ತಾಲ್ಲೂಕಿನ ನೀರಗುಂದ ಗೇಟ್ ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಆವರಣದ ಹೆಲೆಪ್ಯಾಡ್ಗೆ ಆಗಮಿಸುವರು. ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಾಣೇಹಳ್ಳಿಯಲ್ಲಿ ಶ್ರೀ ಶಿವಕುಮಾರ ಕಲಾ ಸಂಘದ ವತಿಯಿಂದ ಆಯೋಜಿಸಿರುವ ನಾಟಕೋತ್ಸವ ಸಮಾರೋಪ ಸಮಾರಂಭದಲ್ಲಿ ಭಾಗಹಿಸುವರು. ರಾತ್ರಿ 8.30ಕ್ಕೆ ಹೊಸದುರ್ಗ ತಾಲ್ಲೂಕು ಸಾಣೇಹಳ್ಳಿಯಿಂದ ರಸ್ತೆ ಮೂಲಕ ದಾವಣಗೆರೆ ಪ್ರಯಾಣ ಬೆಳೆಸಿ, ದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರು ಎಂದು ಜಲ ಸಂಪನ್ಮೂಲ ಸಚಿವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ್ ತಿಳಿಸಿದ್ದಾರೆ.