![](https://www.chandravallinews.com/wp-content/uploads/2023/01/WhatsApp-Image-2023-01-13-at-10.19.59-AM.jpeg)
i
ನಾಡಿನ ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅವರಿಗೆ ಶ್ರದ್ಧಾಂಜಲಿ ಸಭೆ ಜ.14ಕ್ಕೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸುದ್ದಿ ಮನೆಯಲ್ಲಿ ಸುಧೀರ್ಘ ಅವಧಿಗೆ ನಿಷ್ಠೂರತೆಯಿಂದ ದುಡಿದ, ಕನ್ನಡ ಪ್ರಭ ಪತ್ರಿಕೆಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ ಕನ್ನಡ ನಾಡು ನುಡಿಯ ಬಗ್ಗೆ ಅಪಾರ ಬದ್ಧತೆ ಹೊಂದಿದ್ದ
ಹಿರಿಯ ಪತ್ರಕರ್ತರಾದ ಕೆ.ಸತ್ಯನಾರಾಯಣ ಅವರಿಗೆ ವೃತ್ತಿ ನಿರತ ಪತ್ರಕರ್ತರ ಸಂಘಟನೆಗಳು ಒಟ್ಟಾಗಿ ಶ್ರದ್ಧಾಂಜಲಿ ಸಭೆ ಏರ್ಪಡಿಸಿವೆ.
ಪ್ರೆಸ್ ಕ್ಲಬ್ ಆಫ್ ಬೆಂಗಳೂರು,
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ), ಮಾಧ್ಯಮ ಅಕಾಡೆಮಿ, ಬೆಂಗಳೂರು ವರದಿಗಾರರ ಕೂಟ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ
ದಿನಾಂಕ.14.1.2023 ರಂದು ಶನಿವಾರ ಮಧ್ಯಾಹ್ನ 4 ಗಂಟೆಗೆ ಪ್ರೆಸ್ ಕ್ಲಬ್ ಆವರಣದಲ್ಲಿ ಶ್ರದ್ದಾಂಜಲಿ ಸಭೆ ನಡೆಯಲಿದೆ.
ಸುದ್ದಿಮನೆಯಲ್ಲಿ ಸದಾ ವೃತ್ತಿ ಬದ್ಧತೆಯಿಂದ ಮಾರ್ಗದರ್ಶಕರಾಗಿ ಬೆಳಕು ತೋರಿದ ಸತ್ಯನಾರಾಯಣ ಅವರ ಗರಡಿಯಲ್ಲಿ ಪಳಗಿದ ಪತ್ರಕರ್ತರ ದೊಡ್ಡ ಬಳಗವೇ ಇದೆ. ಸರಳ ಸಜ್ಜನಿಕೆಯಿಂದ ಬದುಕು ಸಾಗಿಸಿದ ಅವರ ನಡೆ ನುಡಿ ಕೂಡ ಎಲ್ಲರಿಗೂ ಆದರ್ಶಪ್ರಾಯವಾದದ್ದು. ಹಾಗಾಗಿ ಸತ್ಯನಾರಾಯಣ ಅವರಿಗೆ ವೃತ್ತಿ ಪರ ಪತ್ರಕರ್ತರ ಸಂಘಟನೆಗಳು ಒಟ್ಟಿಗೆ ಶ್ರದ್ಧಾಂಜಲಿ ಸಲ್ಲಿಸಲು ನಿರ್ಧರಿಸಿವೆ.