![](https://www.chandravallinews.com/wp-content/uploads/2023/01/WhatsApp-Image-2021-11-19-at-2.47.58-PM.jpeg)
i
ಒಕ್ಕಲಿಗ-ಲಿಂಗಾಯಿತ ಮೀಸಲಾತಿಗೆ ತಡೆ, ಮುಂದುವರೆದ ಹೋರಾಟ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯದ ಪ್ರಬಲ ಜಾತಿಗಳಾದ ಒಕ್ಕಲಿಗ ಹಾಗೂ ಪಂಚಮಸಾಲಿ ಲಿಂಗಾಯತ ಸಮುದಾಯಗಳಿಗೆ ರಾಜ್ಯ ಸರ್ಕಾರ ರಚನೆ ಮಾಡಲು ಉದ್ದೇಶಿಸಿದ್ದ ಪ್ರವರ್ಗ-2ಸಿ, 2ಡಿ ಪ್ರವರ್ಗಗಳು ಸೇರಿದಂತೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎ ಸೇರ್ಪಡೆಗೆ ಹೈಕೋರ್ಟ್ ತಡೆ ನೀಡಿದೆ.
ಹೀಗಾಗಿ ಈ ಎರಡು ವರ್ಗಗಳ ಮೀಸಲಾತಿ ಹೋರಾಟಕ್ಕೆ ಹಿನ್ನಡೆಯಾಗಿದ್ದು ಒಂದು ಕಡೆಯಾದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ನಿಟ್ಟುಸಿರು ಬಿಟ್ಟಿದೆ.
ಕರ್ನಾಟಕ ಸರ್ಕಾರದ ಮೀಸಲಾತಿ ಪರಿಷ್ಕೃತ ನಿರ್ಧಾರವನ್ನು ಪ್ರಶ್ನಿಸಿ ರಾಘವೇಂದ್ರ ಎಂಬುವವರು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಅಂತಿಮ ತೀರ್ಪು ನೀಡುವವರೆಗೂ ಮೀಸಲಾತಿ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಪ್ರವರ್ಗ-3ಎನದ್ದ ಒಕ್ಕಲಿಗರಿಗೆ 2ಸಿ, ಪ್ರವರ್ಗ-3ಡಿ ಅಡಿಯಲ್ಲಿ ವೀರಶೈವ ಲಿಂಗಾಯಿತರಿಗೆ ಪ್ರವರ್ಗ-2ಡಿ ಹೊಸ ಪ್ರವರ್ಗ ರಚನೆ ಮಾಡಿ ಮೀಸಲಾತಿ ಹೆಚ್ಚಿಸಿ ಹೋರಾಟ ತಣ್ಣಗಾಗಿಲು ಯತ್ನಿಸಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸಂಪುಟ ಸಮಿತಿ ತೀರ್ಮಾನಕ್ಕೆ ಈಗ ಹಿನ್ನಡೆಯಾಗಿದೆ.