![](https://www.chandravallinews.com/wp-content/uploads/2023/12/WhatsApp-Image-2023-12-06-at-10.45.54-PM-2-1024x559.jpeg)
i
ಸರ್ಕಾರಿ ನೌಕರರು-ಅವರ ಅವಲಂಬಿತರಿಗೆ ಆರೋಗ್ಯ ಸಂಜೀವಿನಿ ಯೋಜನೆ…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ನೂತನ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾಠನಗೊಳಿಸುವ ಸಂಬಂಧ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಸದಸ್ಯರನ್ನು ಯೋಜನೆಯಡಿಯಲ್ಲಿ ನೊಂದಾಯಿಸಿಕೊಳ್ಳಲು ಹೆಚ್.ಆರ್.ಎಂ.ಎಸ್.1.0 ತಂತ್ರಾಂಶದಲ್ಲಿ (ವೆಬ್ ಅಪ್ಲಿಕೇಶನ್) https://hrms.karnataka.gov.in ಯುಆರ್ಎಲ್ ಮೂಲಕ ಹಾಗೂ ಮೊಬೈಲ್ ಅಪ್ಲಿಕೇಶನ್ನಲ್ಲಿ https://hrmsenroll.karnataka.gov.in ಯುಆಎಲ್ ಮೂಲಕ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಹಂತ ಹಂತವಾಗಿ ನೊಂದಾಯಿಸುವ ವಿಧಾನ ಕೈಪಿಡಿಯಲ್ಲಿ ವಿವರಿಸಲಾಗಿದ್ದು, ಕೈಪಿಡಿಯಲ್ಲಿ ತಿಳಿಸಿರುವಂತೆ ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಅವಲಂಬಿತ ಕುಟುಂಬದ ಸದಸ್ಯರ ಅವಶ್ಯಕ ಮಾಹಿತಿಯನ್ನು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (ಹೆಚ್.ಆರ್.ಎಂ.ಎಸ್.) ತಂತ್ರಾಂಶದಲ್ಲಿ ಇಂಧೀಕರಿಸಬೇಕಾಗಿರುತ್ತದೆ.
ನಂತರ ವೈದ್ಯಕೀಯ ಹಾಜರಾತಿ ನಿಯಮಗಳನ್ವಯ ಬಟವಾಡೆ ಅಧಿಕಾರಿಗಳು ಪ್ರತಿ ಫಲಾನುಭವಿಗಳ ದತ್ತಾಂಶವನ್ನು ಪರಿಶೀಲಿಸಿ ತಂತ್ರಾಂಶದಲ್ಲಿ ಅನುಮೋದಿಸಬೇಕಾಗಿರುತ್ತದೆ. ತಂತ್ರಾಂಶದಲ್ಲಿ ಫಲಾನುಭವಿಗಳ ಬಟವಾಡೆ ಅಧಿಕಾರಿಗಳಿಂದ ಅನುಮೋದನೆಯ ನಂತರ ಚಿಕಿತ್ಸೆ ಪಡೆಯಲು ಅರ್ಹತೆ ಹೊಂದುತ್ತಾರೆ.
ಅದರಂತೆ ಇದುವರೆಗೂ ಒಟ್ಟು 39,264 ಸದಸ್ಯರ ಅರ್ಜಿಗಳನ್ನು ಸಲ್ಲಿಸಲಾಗಿದೆ. 11,194 ಸದಸ್ಯರ ಅರ್ಜಿಗಳು ಬಟವಾಡೆ ಅಧಿಕಾರಿಗಳಿಂದ ಅನುಮೋದನೆಯಾಗಿದೆ. ಉಳಿದಂತೆ ಯೋಜನೆಗೆ ಒಳಪಡುವ ಎಲ್ಲಾ ಸರಕಾರಿ ನೌಕರರು ಹಾಗೂ ಅವಲಂಬಿತ ಕುಟುಂಬ ಸದಸ್ಯರು ಮಾನವ ಸಂಪನ್ಮೂಲ ನಿರ್ವಹಣಾ ವ್ಯವಸ್ಥೆ (ಹೆಚ್.ಆರ್.ಎಂ.ಎಸ್.) ತಂತ್ರಾಂಶದಲ್ಲಿ ಮಾಹಿತಿಯನ್ನು ಇಂಧೀಕರಿಸುವಂತೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.