![](https://www.chandravallinews.com/wp-content/uploads/2023/12/WhatsApp-Image-2023-12-06-at-10.45.56-PM-1-1024x696.jpeg)
i
ಕೊಬ್ಬರಿ ಪ್ರೊತ್ಸಾಹಧನ ಹೆಚ್ಚಳಕ್ಕೆ ಕ್ರಮ; ಸಚಿವ ಶಿವಾನಂದ ಪಾಟೀಲ…
ಚಂದ್ರವಳ್ಳಿ ನ್ಯೂಸ್, ಸುವರ್ಣಸೌಧ ಬೆಳಗಾವಿ:
ರಾಜ್ಯ ಸರಕಾರವು ತೆಂಗು ಬೆಳೆಗಾರರಿಗೆ ಸಹಾಯ ಮಾಡಲು, ಕೇಂದ್ರದ ಬೆಂಬಲ ಬೆಲೆ ಯೋಜನೆಯಡಿ ನೀಡುವ ದರದೊಂದಿಗೆ ಕೊಬ್ಬರಿ ಖರೀದಿಗೆ ಈಗಾಗಲೇ 1,225 ರೂ.ಗಳನ್ನು ಪ್ರೊತ್ಸಾಹಧನ ನೀಡುತ್ತಿದೆ ಎಂದು ಜವಳಿ, ಕಬ್ಬು ಅಭಿವೃದ್ದಿ, ಸಕ್ಕರೆ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಸಭೆಯಲ್ಲಿ ತಿಳಿಸಿದರು.
ಶೂನ್ಯವೇಳೆಯಲ್ಲಿ ಶಾಸಕ ಶಿವಲಿಂಗೆಗೌಡ, ಎಚ್.ಡಿ.ರೇವಣ್ಣ ಸೇರಿದಂತೆ ವಿವಿಧ ಶಾಸಕರು ಕೊಬ್ಬರಿ ಖರೀದಿ ಬೆಲೆ ಬಹಳಷ್ಟು ಕಡಿಮೆ ಆಗಿರುವುದರಿಂದ ಸರಕಾರಗಳು ರೈತರ ನೆರವಿಗೆ ಬರಬೇಕೆಂದು ವಿಷಯ ಪ್ರಸ್ತಾಪಿಸಿದ್ದರಿಂದ ಅವರಿಗೆ ಉತ್ತರಿಸಿ, ಮಾತನಾಡಿದರು.
ನಫೇಡ್ ಸಂಸ್ಥೆ ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಕಾರ್ಯವನ್ನು ಸ್ಥಗಿತಗೊಳಿಸಿರುವುದರಿಂದ ರೈತರಿಗೆ ತೊಂದರೆ ಆಗಿದೆ. ಮರು ಆರಂಭಿಸಲು ಕೇಂದ್ರ ಸರಕಾರಕ್ಕೆ ಪತ್ರ ಬರೆಯಲಾಗಿದೆ. ರಾಜ್ಯ ಸರಕಾರ ಕೊಬ್ಬರಿ ಖರೀದಿಗೆ ನೀಡಿರುವ ಈಗೀರುವ ಪ್ರೋತ್ಸಾಹಧನ ರೂ.1225 ಗಳೊಂದಿಗೆ ರೂ.225 ಸೇರಿಸಿ ಒಟ್ಟು 1500 ರೂ.ಗಳನ್ನು ನೀಡುತ್ತದೆ. ಕೇಂದ್ರ ಆದಷ್ಟು ಬೇಗ ಖರೀದಿ ಪ್ರಾರಂಭಿಸಿದರೆ ರೈತರಿಗೆ ಒಳಿತಾಗುತ್ತದೆ ಎಂದು ತಿಳಿಸಿದರು.