i
ಚಿತ್ರದುರ್ಗ ಹಾಗೂ ದಾವಣಗೆರೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ…
ಚಂದ್ರವಳ್ಳಿ ನ್ಯೂಸ್, ಧಾರವಾಡ:
2024ರ ಸಾಲಿನ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂತಿಮ ಹಂತಕ್ಕೆ ಬಂದು ನಿಂತಿದೆ ನಾಳೆ ಜೂನ್ 1 ರಂದು ಉತ್ತರ ಭಾರತದಲ್ಲಿ ಕೊನೆ ಹಂತದ ಚುನಾವಣೆ ಮುಕ್ತಾಯವಾಗಲಿದೆ ಜೂನ್ 4 ರಂದು ದೇಶ ವ್ಯಾಪ್ತಿಯ ಎಲ್ಲಾ ಲೋಕಸಭಾ ಕ್ಷೇತ್ರಗಳ ಫಲಿತಾಂಶ ಹೊರಬೀಳಲಿದ್ದು ಚಿತ್ರದುರ್ಗ ಹಾಗೂ ದಾವಣಗೆರೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ರಘು ಗೌಡ(9916101265) ವಿಶ್ವಾಸ ವ್ಯಕ್ತ ಪಡಿಸಿದ್ದಾರೆ. ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದೇಶದ ಜನತೆ ಎದುರು ನೋಡುತ್ತಿದ್ದಾರೆ. ಸುದ್ದಿ ಮಾಧ್ಯಮಗಳು ಗೆಲುವಿನ ಲೆಕ್ಕಾಚಾರಗಳಲ್ಲಿ ವಿಮರ್ಶೆಯ ಆಯಾಮಗಳ ಮೂಲಕ ಸುದ್ದಿ ಮಾಡುತ್ತಿವೆ.
ಕರ್ನಾಟಕದಲ್ಲಿಯೂ ಯಾವ ಪಕ್ಷಗಳು ಎಷ್ಟು ಗೆಲುವು ಸಾಧಿಸಬಹುದು ಎಂಬ ವಿಚಾರದಲ್ಲಿ ಜನರ ಮಾತುಗಳಲ್ಲಿ ಚರ್ಚೆಗಳು ನಡೆಯುತ್ತಿವೆ ಕೆಲವೊಂದು ಕ್ಷೇತ್ರಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಟ್ಟಿಂಗ್ ನಡೆಯುತ್ತಿದೆ ಎಂಬ ಸುದ್ದಿ ಬರುತ್ತಿವೆ.
ರಾಜಕೀಯ ಪಂಡಿತರು ಹಾಗೂ ಕೆಲವು ಸುದ್ದಿ ಮಾಧ್ಯಮಗಳು ಚುನಾವಣೆಯ ಗೆಲುವಿನ ವಿಚಾರದಲ್ಲಿ ರಾಜ್ಯಾದ್ಯಂತ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ನಾಡಿಮಿಡಿತದ ಮೇಲೆ ಗೆಲುವಿನ ಲೆಕ್ಕಾಚಾರಗಳ ಬಗ್ಗೆ ವಿಮರ್ಶೆ ಮಾಡುತ್ತಿವೆ. ಅದರಂತೆಯೇ ರಾಜ್ಯ ಸರ್ಕಾರದ ಗುಪ್ತಚರ ಇಲಾಖೆಯು ಫಲಿತಾಂಶದ ಬಗ್ಗೆ ಮಾಹಿತಿ ಸಂಗ್ರಹಿಸಿದೆ ಆ ಪ್ರಕಾರವಾಗಿ ಚಿತ್ರದುರ್ಗ ಹಾಗೂ ದಾವಣಗೆರೆ ಈ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ ಎನ್ ಚಂದ್ರಪ್ಪ ಹಾಗೂ ಪ್ರಭಾ ಮಲ್ಲಿಕಾರ್ಜುನ್ ಇವರಿಬ್ಬರ ಗೆಲುವು ಖಚಿತವಾಗಿದೆ ಎಂದು ಗುಪ್ತಚರ ಇಲಾಖೆ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಎರಡು ಹಂತಗಳ ಲೋಕಸಭಾ ಚುನಾವಣೆ ಪ್ರಕ್ರಿಯೆ ಮುಗಿದ ತರುವಾಯ ರಾಜಕೀಯ ಜ್ಞಾನದ ಪ್ರಕಾರವಾಗಿ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಹಾಗೂ ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಇವರಿಬ್ಬರ ಗೆಲುವು ಸಾಧಿಸುವುದು ಬಹುತೇಕ ಖಚಿತ ಎಂದು ಇವರಿಬ್ಬರ ವಿಚಾರಗಳಲ್ಲಿ ವಿಮರ್ಶಿಸಿದ ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಾಪ್ ಗ್ರೂಪ್ ಗಳಲ್ಲಿ ಹಾಗೂ ನನ್ನ ಪೇಸ್ ಬುಕ್ ಅಕೌಂಟ್ ನಲ್ಲಿ ಅಪ್ಲೋಡ್ ಮಾಡಿರುವೆ ಈ ವಿಚಾರವನ್ನು ವಾಟ್ಸಾಪ್ ಗ್ರೂಪ್ ಗಳಲ್ಲಿ ಗಮನಿಸಿದ ಅನೇಕ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನನ್ನೊಂದಿಗೆ ಪೋನ್ ಮಾತಿನಲ್ಲಿಯೇ ಗೆಲುವಿನ ಸಂತೋಷ ಹಂಚಿಕೊಂಡರು ಎಂದು ರಘು ಗೌಡ ತಿಳಿಸಿದ್ದಾರೆ.