![](https://www.chandravallinews.com/wp-content/uploads/2024/06/WhatsApp-Image-2024-06-01-at-5.35.50-AM.jpeg)
i
ಸಚಿವ ಬಿ.ನಾಗೇಂದ್ರ ರಾಜೀನಾಮೆ?
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ಸರ್ಕಾರದಲ್ಲಿ ಭಾರೀ ಭ್ರಷ್ಟಾಚಾರ ಬಯಲಿಗೆ ಬಂದಿದ್ದು ಸಂಬಂಧಿಸಿದ ಇಲಾಖೆ ಹೊಣೆ ಹೊತ್ತಿರುವ ಸಚಿವರ ಮೊದಲ ವಿಕೆಟ್ಪತನಕ್ಕೆ ಕ್ಷಣಗಣನೆ ಶುರುವಾಗಿದೆ.
ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಖುದ್ದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ವಾಲ್ಮೀಕಿ ನಿಗಮದ ಅಧಿಕಾರಿ ಪಿ.ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮುಖಭಂಗವಾಗಬಾರದೆಂದು ಮುಖ್ಯಮಂತ್ರಿಗಳು ಖಡಕ್ ಸೂಚನೆ ನೀಡಿದ್ದಾರೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.
ತನಿಖೆ ಬಳಿಕ ಮತ್ತೆ ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಹಾಗೂ ಈ ಪ್ರಕರಣವನ್ನು ಸಿಬಿಐಗೆ ನೀಡುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜೊತೆ ಚರ್ಚಿಸಲು ವಿಧಾನ ಪರಿಷತ್ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ದೆಹಲಿಗೆ ತೆರಳಿ ಚರ್ಚೆ ನಡೆಸಿದ್ದಾರೆ. ಅಧಿಕಾರಿಯ ಆತ್ಮಹತ್ಯೆ ಹಾಗೂ ಸಂಭವನೀಯ ಪರಿಣಾಮಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸರ್ಕಾರಕ್ಕೆ ಮುಖಭಂಗವಾಬಾರದು ಹೀಗಾಗಿ ಬಿ.ನಾಗೇಂದ್ರ ರಾಜಿನಾಮೆ ನೀಡುವುದು ಒಳಿತು. ತನಿಖೆ ಪೂರ್ಣವಾದ ಬಳಿಕ ಮತ್ತೆ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವುದಾಗಿ ಸಭೆಯಲ್ಲಿ ತೀರ್ಮಾನ ಕೈಗೊಂಡರು. ಸಭೆ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ನಾಗೇಂದ್ರ ಅವರಿಗೆ, ಖುದ್ದು ತಾವೇ ಹೇಳಿಕೆ ನೀಡಿ ರಾಜೀನಾಮೆ ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.