i
ಅಗಸನಕಲ್ಲು ಕುವೆಂಪು ಶಾಲೆ ಹಿಂಭಾಗದ ಬಾಲಕ ಕಣ್ಮರೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಅಗಸನಕಲ್ಲು ಕುವೆಂಪು ಶಾಲೆ ಹಿಂಭಾಗದ ನಿವಾಸಿ ನಬೀವುಲ್ಲಾ ತಂದೆ ರೆಹಮತ್ ವುಲ್ಲಾ (15 ವರ್ಷ) ಎಂಬ ಬಾಲಕ ಕಾಣೆಯಾದ ಕುರಿತು 2024ರ ಜೂನ್ 22 ರಂದು ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಬಾಲಕನ ಚಹರೆ ಇಂತಿದೆ. 5.5 ಅಡಿ ಎತ್ತರ, ಕೋಲು ಮುಖ, ಗೋದಿ ಮೈಬಣ್ಣ ಹೊಂದಿದ್ದು, ತಲೆಯಲ್ಲಿ ಸುಮಾರು 3 ಇಂಚು ಉದ್ದದ ಕಪ್ಪು ಕೂದಲು ಹಾಗೂ ಬಲ ಹಣೆಯ ಮೇಲೆ ತೊಗರಿ ಕಾಳಿನ ಆಕಾರದ ಹಳೆ ಗಾಯದ ಕಲೆ ಇದೆ. ಕನ್ನಡ ಮತ್ತು ಉರ್ದು ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ಕಪ್ಪು ಬಣ್ಣದ ಷರ್ಟ್, ಸಿಮೆಂಟ್ ಕಲರ್ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.
ಈ ಮೇಲ್ಕಂಡ ಬಾಲಕನ ಕುರಿತು ಮಾಹಿತಿ ತಿಳಿದು ಬಂದಲ್ಲಿ ಕೋಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರ ದೂರವಾಣಿ ಸಂಖ್ಯೆ 08194-222933, 9480803145, ಚಿತ್ರದುರ್ಗ ಉಪವಿಭಾಗ ಪೊಲೀಸ್ ಅಧೀಕ್ಷಕರ ದೂರವಾಣಿ ಸಂಖ್ಯೆ 08194-222430, 9480803120, ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 08194-222782 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ತಿಳಿಸಿದ್ದಾರೆ.