![](https://www.chandravallinews.com/wp-content/uploads/2024/06/WhatsApp-Image-2024-06-27-at-6.22.20-PM-1024x768.jpeg)
i
ರಾಹುಲ್ ಗಾಂಧಿಗೆ ಬಿಗ್ ಶಾಕ್: ಕೋರ್ಟ್ನಿಂದ ಸಮನ್ಸ್ ಜಾರಿ
ಚಂದ್ರವಳ್ಳಿ ನ್ಯೂಸ್, ನವದೆಹಲಿ :
ಲೋಕಸಭೆಗೆ ನೂತನವಾಗಿ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಸಂಸದ ರಾಹುಲ್ ಗಾಂಧಿ ಅವರಿಗೆ ಉತ್ತರ ಪ್ರದೇಶದ ಕೋರ್ಟ್ ಶಾಕ್ ನೀಡಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಸಂಬಂಧ ಇದೇ ಜು.2ರಂದು ಖುದ್ದು ವಿಚಾರಣೆಗೆ ಹಾಜರಾಗಬೇಕು ಎಂದು ಉತ್ತರ ಪ್ರದೇಶದ ಸಂಸದ-ಶಾಸಕರ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ಮಾನಹಾನಿಕರ ಹೇಳಿಕೆಗಳನ್ನ ನೀಡಿದ್ದಾರೆ ಎಂದು ಆಪಾದಿಸಿ ಬಿಜೆಪಿಯ ನಾಯಕ ವಿಜಯ್ ಮಿಶ್ರಾ ಎಂಬುವವರು 2018ರಲ್ಲಿ ಕೇಸ್ ದಾಖಲಿಸಿದ್ದರು. ರಾಮ್ ಪ್ರತಾಪ್ ಎಂಬುವವರು ತಮ್ಮನ್ನು ಈ ಪ್ರಕರಣದಲ್ಲಿ ಭಾಗಿಯನ್ನಾಗಿ ಮಾಡಬೇಕೆಂದು ಒತ್ತಾಯಿಸಿದ್ದರು ಎಂದು ದೂರಿನ ವಕೀಲ ಸಂತೋಷ್ ಕುಮಾರ್ ಪಾಂಡೆ ಹೇಳಿದ್ದಾರೆ.