![](https://www.chandravallinews.com/wp-content/uploads/2024/06/WhatsApp-Image-2024-06-26-at-7.58.48-PM-3-1024x401.jpeg)
i
ಮೊಬೈಲ್, ಫೇಸ್ಬುಕ್, ವಾಟ್ಸ್ಪ್ಗಳಲ್ಲಿಯೇ ಎಲ್ಲರೂ ತಲ್ಲೀನ ಅಪಾಯಕಾರಿ…
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಸಿರಿಗೆರೆ ಯೋಜನಾ ಕಚೇರಿ ವ್ಯಾಪ್ತಿಯ ಕಸಬಾ ಎ.ವಲಯದ ಮುಸಂಡಿಹಾಳ್ನ ಬಸವೇಶ್ವರ ಜ್ಞಾನ ವಿಕಾಸ ಕೇಂದ್ರದಲ್ಲಿ ನಾನು ಓದಿದ ಪುಸ್ತಕ ವಿಮರ್ಶೆ ಕಾಯಕ್ರಮವನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.ಜ್ಞಾನವಿಕಾಸ ಸಮನ್ವಯಾಧಿಕಾರಿ ಶಿವಲೀಲಾ ಎಸ್.ಬಾಗೋಡಿ ಮಾತನಾಡಿ ಧರ್ಮಸ್ಥಳದ ಹೇಮಾವತಿ ಅಮ್ಮನವರ ಮಾರ್ಗದರ್ಶನದಂತೆ ಪ್ರತಿ ತಿಂಗಳು ಮಹಿಳೆಯರಿಗೆ ಉಪಯುಕ್ತವಾದ ಮಾಹಿತಿಯನ್ನು ನೀಡುವ ಸಭೆ ನಡೆಸಲಾಗುತ್ತಿದೆ. ಮೊಬೈಲ್, ಫೇಸ್ಬುಕ್, ವಾಟ್ಸ್ಪ್ಗಳಲ್ಲಿಯೇ ಎಲ್ಲರೂ ತಲ್ಲೀನರಾಗಿರುವ ಈ ಸಂದರ್ಭದಲ್ಲಿ ಪುಸ್ತಕಗಳನ್ನು ಓದಿ ವಿಮರ್ಶೆ ಮಾಡುವುದು ತುಂಬಾ ವಿರಳ. ಪುಸ್ತಕಗಳನ್ನು ಓದುವುದರಿಂದ ಜ್ಞಾನ ಹೆಚ್ಚುತ್ತದೆ ಎಂದು ಹೇಳಿದರು.ಗೀತಾ, ಭಾಗ್ಯಮ್ಮ, ಸವಿತಾ, ಸಾವಿತ್ರಿ, ವೀಣ, ಲತಾ, ಶಶಿಕಲಾ, ಗೌರಮ್ಮ, ಅನುಸೂಯ, ನೀಲಮ್ಮ ಹಾಗೂ ಸಂಘದ ಸದಸ್ಯರುಗಳು ಸಭೆಯಲ್ಲಿ ಭಾಗವಹಿಸಿದ್ದರು.