![](https://www.chandravallinews.com/wp-content/uploads/2024/06/WhatsApp-Image-2024-06-27-at-6.22.17-PM.jpeg)
i
ಮೀಟರ್ ಬಡ್ಡಿ ದಂಧೆಗೆ ಬಲಿಯಾದ ಮೆಕ್ಯಾನಿಕ್..
ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಮೀಟರ್ ಬಡ್ಡಿ ದಂಧೆಗೆ ಮೆಕ್ಯಾನಿಕ್ ಬಲಿಯಾಗಿದ್ದು, ದೊಡ್ಡಬಳ್ಳಾಪುರ ನಗರದಲ್ಲಿ ನಡೆಯುತ್ತಿರುವ ಮೀಟರ್ ಬಡ್ಡಿ ದಂಧಗೆ ಕಡಿವಾಣ ಹಾಕುವವರೆ ಇಲ್ಲದಂತಾಗಿದೆ.
ದೊಡ್ಡಬಳ್ಳಾಪುರ ನಗರದ ವಿನಾಯಕನಗರ ಬಳಿಯ ಕಾರ್ಮೆಲ್ ಜ್ಯೋತಿ ಶಾಲೆ ಸನಿಹ ವಾಸವಾಗಿದ್ದ ಪರ್ವೀಜ್ (45) ಆತ್ಮಹತ್ಯೆಗೆ ಶರಣಾಗಿದ್ದಾನೆ, ದೊಡ್ಡಬಳ್ಳಾಪುರ ನಗರದ ಅಂಬೇಡ್ಕರ್ ಭವನದ ಮುಂದೆ ದ್ವಿಚಕ್ರ ವಾಹನ ಸರ್ವೀಸ್ ಇಟ್ಟುಕೊಂಡಿದ್ದ ಪರ್ವೇಜ್ ಅವರು ( ವಾರಕ್ಕೆ ಶೇ 7 ) ಬಡ್ಡಿಗೆ ಹಲವರ ಬಳಿ ಸಾಲ ಪಡೆದಿದ್ದರು. ಸಾಲದ ಬಡ್ಡಿ ಹಣ ಕೊಡಲಾಗದೆ ಸಾಲಗಾರರ ಕಿರುಕುಳಕ್ಕೆ ಹೆದರಿ ನೇಣಿಗೆ ಶರಣಾಗಿದ್ದಾರೆಂದ್ದು ಕರುನಾಡು ಸೇನೆ ತಾಲೂಕು ಅಧ್ಯಕ್ಷ ತೆರದಾಳ್ ಶ್ರೀನಿವಾಸ್ ಆರೋಪಿಸಿದ್ದಾರೆ.
ಮಾಧ್ಯಮ ಹೇಳಿಕೆ ನೀಡಿದ ಅವರು, ಪರ್ವೇಜ್ ನಮ್ಮ ಸಂಘಟನೆಯ ಕಾರ್ಯಕರ್ತರಾಗಿದ್ದರು. ಮೃದು ಸ್ವಭಾವದ ಅವರು ಯಾರಿಗೂ ತೊಂದರೆ ಕೊಟ್ಟವರಲ್ಲ, ಪೊಲೀಸರು ಸಜ್ಜನ ವ್ಯಕ್ತಿಯ ಸಾವಿಗೆ ಕಾರಣವಾದವರ ವಿರುದ್ಧ ಸೂಕ್ತ ಕಾನೂನು ರೀತಿಯ ಕ್ರಮ ಜರುಗಿಸಬೇಕು. ವಾರದ ಬಡ್ಡಿ ದಂಧೆಗೆ ಕಡಿವಾಣ ಹಾಕಿ ಮುಂದೆ ಆಗಬಹುದಾದ ಅನಾಹುತಗಳನ್ನು ತಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ, ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.