![](https://www.chandravallinews.com/wp-content/uploads/2024/06/WhatsApp-Image-2024-06-27-at-7.31.59-PM-2-1024x542.jpeg)
i
ಸ್ವಾಮೀಜಿ ಒಬ್ಬರು ಸಿಎಂಗೆ ನೇರವಾಗಿ ಮನವಿ ಮಾಡಿರುವುದು ಇದೇ ಮೊದಲು…
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಕ್ಕಲಿಗ ಸ್ವಾಮೀಜಿಯೊಬ್ಬರು ಕೆಂಪೇಗೌಡ ಜಯಂತಿ ಕಾರ್ಯಕ್ರಮದ ವೇದಿಕೆ ಮೇಲೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವುದು ಅತ್ಯಂತ ಗಂಭೀರ ವಿಷಯ.
ವೇದಿಕೆ ಕಾರ್ಯಕ್ರಮದಲ್ಲಿ ಇಷ್ಟು ನೇರವಾಗಿ ಸ್ವಾಮೀಜಿ ಮನವಿ ಮಾಡಿದಾಗಲು ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿಯಬಾರದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ.ಡಿಕೆ ಶಿವಕುಮಾರ್ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀ ಹೇಳಿಕೆ ಸಿದ್ದರಾಮಯ್ಯನವರಿಗೆ ಅವಮಾನ ಆದಂತಾಗಿದೆ ಎಂದು ಆರ್ ಅಶೋಕ್ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಸಿಎಂ ಹುದ್ದೆ ಬಿಟ್ಟುಕೊಡಿ ಎಂದು ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಎಂಬುದು ಗೊತ್ತಿಲ್ಲ. ಆದರೆ ರಾಜಕೀಯದ ಒಳಗೆ ಹೋಗಿ ತಿಳಿದುಕೊಳ್ಳುವ ಸಾಮರ್ಥ್ಯ ಸಿದ್ದರಾಮಯ್ಯ ಅವರಿಗೆ ಇದೆ. ಒಂದು ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಲಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎನ್ನುವುದು ನನ್ನ ಅನಿಸಿಕೆಯಾಗಿದೆ ಎಂದರು.