![](https://www.chandravallinews.com/wp-content/uploads/2024/06/WhatsApp-Image-2024-01-29-at-10.59.13-PM-1.jpeg)
i
ವಿದ್ಯುತ್ ಗೋಪುರ ಮುಟ್ಟದಂತೆ ಸಾರ್ವಜನಿಕರಿಗೆ ಸೂಚನೆ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಿವಮೊಗ್ಗ ಯುಟಿಪಿ ವಿಭಾಗ ಕರ್ನಾಟಕ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಅವರು ಸ್ವಂತ ನಿರ್ವಹಣೆ ಯೋಜನೆಯಡಿಯಲ್ಲಿ 3530ಕೆವಿಎ 66ಕೆವಿ ದರ್ಜೆ ಸಾಮಥ್ರ್ಯದ ವಿದ್ಯುತ್ನ್ನು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಕಾಗಲಗೆರೆ ಗ್ರಾಮದಲ್ಲಿ ಏತ ನೀರಾವರಿ ಯೋಜನೆಗೆ ಸಂಪರ್ಕ ಕಲ್ಪಿಸಲು 6.818 ಕಿ.ಮೀ ಉದ್ದದ 66ಕೆವಿ ಪ್ರಸರಣ ಮಾರ್ಗವನ್ನು ಹಾಲಿ ಇರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ 66/11ಕೆವಿ ಸಾಸಲುಹಳ್ಳ ವಿದ್ಯುತ್ ಕೇಂದ್ರದಿಂದ ಉದ್ದೇಶಿತ 66/6.6ಕೆವಿ ಕಾಗಲಗೆರೆ ಏತ ನೀರಾವರಿ ಪಂಪಿಂಗ್ ಯಾರ್ಡ್ ವಿದ್ಯುತ್ ಕೇಂದ್ರದವರೆಗೆ ಕಾಮಗಾರಿ ಪೂರ್ಣಗೊಂಡಿದೆ.
ಈ 66 ಕೆವಿ ವಿದ್ಯುತ್ ಮಾರ್ಗವನ್ನು ಜುಲೈ 1 ರಂದು ಅಥವಾ ತದನಂತರ ದಿನಗಳಲ್ಲಿ ಚೇತನಗೊಳಿಸುತ್ತಿರುವುದರಿಂದ 66ಕೆವಿ ಪ್ರಸರಣ ಮಾರ್ಗದ ವಿದ್ಯುತ್ ಗೋಪುರಗಳನ್ನು ಸಾರ್ವಜನಿಕರು ಮುಟ್ಟುವುದಾಗಲಿ, ಹತ್ತುವುದಾಗಲಿ, ಮರದ ರೆಂಬೆ, ಲೋಹದ ತಂತಿಗಳನ್ನು ಹಾಗೂ ಇತರೆ ಯಾವುದೇ ವಸ್ತುಗಳನ್ನು ಮಾರ್ಗದ ಮೇಲೆ ಎಸೆಯುವುದಾಗಲಿ ಮತ್ತು ಗೋಪುರಗಳಿಗೆ ಜಾನುವಾರುಗಳನ್ನು ಕಟ್ಟುವುದಾಗಲಿ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಈ ಮಾರ್ಗದ ಮೊಗಸಾಲೆಯಲ್ಲಿ ಅಪಾಯದ ಮಟ್ಟದಲ್ಲಿರುವ ಮರಗಳನ್ನು ಸುರಕ್ಷತೆ ದೃಷ್ಠಿಯಿಂದ ತೆಗೆದು ಹಾಕಲು ನಿಗಮದ ನಿಯಮಾನುಸಾರ ಸೂಕ್ತ ಪರಿಹಾರ ತೆಗೆದುಕೊಂಡು, ಮರಗಳನ್ನು ತೆಗೆಯದೇ ಇರುವ ಭೂ ಮಾಲೀಕರು ಕೂಡಲೇ ಮಾರ್ಗದ ಮೊಗಸಾಲೆಯಲ್ಲಿ ಇರುವ ಮರಗಳನ್ನು ಕಡಿದು ಹಾಕಲು ಅನುಮತಿ ನೀಡಬೇಕು. ಒಂದು ವೇಳೆ ಈ ಎಚ್ಚರಿಕೆಯನ್ನು ಉಲ್ಲಂಘಿಸಿದಲ್ಲಿ ವಿದ್ಯುತ್ ಮಾರ್ಗದಿಂದ ಸಾರ್ವಜನಿಕರಿಗೆ ಆಗುವ ಹಾನಿ, ತೊಂದರೆ, ಅಪಘಾತಗಳಿಗೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಜವಾಬ್ದಾರಿಯಾಗಿರುವುದಿಲ್ಲ.
ವಿದ್ಯುತ್ ಮಾರ್ಗವು ಮಲ್ಲೇನಹಳ್ಳಿ, ಸಾಸಲು ಹಾಗೂ ಮುತ್ತೂಗದೂರು ಗ್ರಾಮಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾದುಹೋಗಲಿವೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಬೃಹತ್ ಕಾಮಗಾರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.