i
ನ್ಯಾಯಾಂಗ ತರಬೇತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ಜಿಲ್ಲೆಯಲ್ಲಿ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ವಿಯನ್, ಜೈನ್, ಪಾರ್ಸಿ, ಬೌದ್ದ ಮತ್ತು ಸಿಖ್ ವರ್ಗದ ಕಾನೂನು ಪದವಿಧರರನ್ನು ನ್ಯಾಯಾಂಗ ತರಬೇತಿ ಯೋಜನೆಯಡಿ 2024-25ನೇ ಸಾಲಿನಲ್ಲಿ 6 ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 12 ಕೊನೆಯ ದಿನವಾಗಿದೆ.
ಷರತ್ತುಗಳು: ಅಭ್ಯರ್ಥಿಯು ಮುಸ್ಲಿಂ, ಕ್ರಶ್ಚಿಯನ್, ಜೈನ್, ಪಾರ್ಸಿ, ಬೌದ್ಧ ಮತ್ತು ಸಿಖ್ ಸಮುದಾಯಕ್ಕೆ ಸೇರಿದ್ದು, ಕರ್ನಾಟಕ ರಾಜ್ಯ ನಿವಾಸಿಯಾಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕಕ್ಕೆ 2 ವರ್ಷದ ಒಳಗೆ ಅಭ್ಯರ್ಥಿಯು ಎಲ್ಎಲ್ಬಿ ಪದವಿ ಮುಗಿಸಿರಬೇಕು. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದು ಸಲ್ಲಿಸಬೇಕು. ಅಭ್ಯರ್ಥಿಯು ಕುಟುಂಬದ ವಾರ್ಷಿಕ ಆದಾಯ 3.50ಲಕ್ಷ ಮೀರಿರಬಾರದು. ಈ ತರಬೇತಿಯು 4 ವರ್ಷಗಳಾಗಿದ್ದು, ತರಬೇತಿ ಅವಧಿಯಲ್ಲಿ ಮಾಸಿಕ ರೂ. 5000/ ಭತ್ಯೆ ನೀಡಲಾಗುವುದು. ಆಯ್ಕೆಯನ್ನು ಜಿಲ್ಲಾ ಆಯ್ಕೆ ಸಮಿತಿ ಮೂಲಕ ನಡೆಸಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಯಸ್ಸು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 30 ವರ್ಷ ಮೀರಿರಬಾರದು. ಅಭ್ಯರ್ಥಿಯು ಬಾರ್ ಕೌನ್ಸಿಲ್ನಲ್ಲಿ ಹೆಸರು ನೊಂದಾಯಿಸಿರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಜಾತಿ, ಆದಾಯ ಪ್ರಮಾಣ ಪತ್ರ ಅಥವಾ ಇತರೆ ಯಾವುದೇ ತಪ್ಪು ಮಾಹಿತಿಯನ್ನು ನೀಡಿ ಆಯ್ಕೆಯಾದ ಪಕ್ಷದಲ್ಲಿ ಅಂತವರನ್ನು ಶಿಕ್ಷೆಗೆ ಗುರಿಪಡಿಸುವುದಲ್ಲದೇ, ಶಿಷ್ಯ ವೇತನದ ಜೊತೆಗೆ ಶೇ.10ರ ಬಡ್ಡಿಯನ್ನು ಭೂ ಕಂದಾಯ ಬಾಕಿ ರೂಪದಲ್ಲಿ ಸರ್ಕಾರಕ್ಕೆ ಮರು ಪಾವತಿ ಮಾಡುವುದಾಗಿ ಹಾಗೂ ತರಬೇತಿಯನ್ನು ಮಧ್ಯದಲ್ಲಿ ಬಿಟ್ಟಲ್ಲಿ ಇಲಾಖೆಯಿಂದ ಪಡೆದ ಶಿಷ್ಯವೇತನವನ್ನು ಹಿಂತಿರುಗಿಸುವುದಾಗಿ ಮುಚ್ಚಳಿಕೆ ಬರೆದು ಕೊಡಬೇಕು. ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು 15 ವರ್ಷಗಳಿಗೆ ಕಡಿಮೆ ಇಲ್ಲದಂತೆ ಸೇವೆ ಸಲ್ಲಿಸಿರುವ ವಕೀಲರ ಬಳಿ ತರಬೇತಿ ಪಡೆಯುತ್ತೀರಿ ಎಂಬ ಬಗ್ಗೆ ಲಿಖಿತ ರೂಪದಲ್ಲಿ ತಿಳಿಸಿರಬೇಕು. ಅಪೂರ್ಣ ಅವಧಿ ಮೀರಿದ ತಪ್ಪು ಮಾಹಿತಿ ಅಥವಾ ನಿಗದಿತ ದಿನಾಂಕದ ನಂತರ ಸ್ವೀಕರಿಸಲಾದ ಅರ್ಜಿಗಳನ್ನು ಯಾವುದೇ ಮುನ್ಸೂಚನೆ ನೀಡದೆ ತಿರಸ್ಕರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಾಗೂ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಲು ನಗರದ ಸ್ಟೇಡಿಯಂ ರಸ್ತೆಯ ಶ್ರೀ ರಾಮ ಕಾಂಪ್ಲೆಕ್ಸ್ನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.