![](https://www.chandravallinews.com/wp-content/uploads/2024/06/WhatsApp-Image-2024-01-29-at-10.59.13-PM-2.jpeg)
i
ಇಂದು ಕೆಪಿಟಿಸಿಎಲ್ ಉಪಸ್ಥಾವರಗಳ ಉದ್ಘಾಟನೆ
ಚಂದ್ರವಳ್ಳಿ ನ್ಯೂಸ್, ತುಮಕೂರು:
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವತಿಯಿಂದ ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಭೈರೇನಹಳ್ಳಿ ಉಪಸ್ಥಾವರ ಪ್ರದೇಶದಲ್ಲಿ ಜುಲೈ ೧ರಂದು ಬೆಳಿಗ್ಗೆ ೧೧ ಗಂಟೆಗೆ ಸಂಕೇನಹಳ್ಳಿ(ಐ.ಕೆ.ಕಾಲೋನಿ) ಮತ್ತು ಭೈರೇನಹಳ್ಳಿ(ತುಂಬಾಡಿ) ಗ್ರಾಮಗಳಲ್ಲಿ ನೂತನವಾಗಿ ನಿರ್ಮಿಸಿರುವ ೨*೮ ಎಂ.ವಿ.ಎ., ೬೬/೧೧ ಕೆ.ವಿ. ಉಪಸ್ಥಾವರಗಳ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಸಂಸದ ವಿ. ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಇಂಧನ ಸಚಿವ ಕೆ.ಜೆ.ಜಾರ್ಜ್ ಉದ್ಘಾಟಿಸುವರು. ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ಅಧ್ಯಕ್ಷತೆ ವಹಿಸುವರು. ಸಹಕಾರ ಸಚಿವ ಕೆ.ಎನ್.ರಾಜಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ.ಜಯಚಂದ್ರ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಸೇರಿದಂತೆ ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸುವರು.