ಬೈಕ್, ಸೈಕಲ್ ಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಸುಟ್ಟಿದ್ದ 3 ಆರೋಪಿಗಳ ಬಂಧನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹತ್ತಾರು ದ್ವಿಚಕ್ರ ವಾಹನಗಳಿಗೆ ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಮೂವರು ಕಿಡಿಗೇಡಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

ಹಲಸೂರು ಪೊಲೀಸ್​ ಠಾಣಾ ವ್ಯಾಪ್ತಿಯ ಕಾಳಿಯಮ್ಮ ದೇವಸ್ಥಾನದ ಬೀದಿ ಬದಿ ಅಂಗಡಿ ಸೇರಿದಂತೆ ಹಲವು ವಾಹನಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದ ಆರೋಪಿಗಳಾದ ಡಿ.ಜೆ.ಹಳ್ಳಿ ಸುತ್ತಮುತ್ತಲಿನ ನಿವಾಸಿಗಳಾದ ಮಕ್ಸೂದ್ ಅಹಮದ್, ಇಜಾರ್ ಪಾಷಾ ಹಾಗೂ ಹಮಿತ್ ತಬ್ರೇಜ್ ಬಂಧಿತರು.

- Advertisement - 

ಏನಿದು ಘಟನೆ:
ಕಳೆದ ತಿಂಗಳ ಜುಲೈ 28ರ ಬೆಳಗಿನ ಜಾವ ಕುಡಿದ ಅಮಲಿನಲ್ಲಿ ಉದ್ದೇಶ ಪೂರ್ವಕವಾಗಿ 10 ದ್ವಿಚಕ್ರ ವಾಹನಗಳು
, 7 ಸೈಕಲ್​ ಹಾಗೂ ಅಂಗಡಿಗೆ ಬೆಂಕಿ ಹಚ್ಚಿದ್ದ ದುಷ್ಕರ್ಮಿಗಳ ಕೃತ್ಯದಿಂದಾಗಿ ದುರ್ಘಟನೆಯಲ್ಲಿ ವಾಹನಗಳಿಗೆಲ್ಲ ಹಾನಿಯಾಗಿದ್ದವು. ಈ ಸಂಬಂಧ ಎರಡು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಮೂವರನ್ನು ಬಂಧಿಸಿದ್ಧಾರೆ.

ಈ ಹಿಂದೆ ಹಲಸೂರಿನ ಬಜಾರ್ ಸ್ಟ್ರೀಟ್​ನಲ್ಲಿ ಆರೋಪಿ ಮಕ್ಸೂದ್ ಅಹಮದ್  ತರಕಾರಿ ವ್ಯಾಪಾರ ಮಾಡುತ್ತಿದ್ದ. ಕೆಲ ತಿಂಗಳ ಹಿಂದೆಯಷ್ಟೇ ಡಿ.ಜೆ. ಹಳ್ಳಿಗೆ ಮನೆ ಬದಲಿಸಿದ್ದ. ಹಲಸೂರಿನಲ್ಲಿ ವಾಸವಿರುವಾಗ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ಜೈಲಿನಲ್ಲಿರುವ ಪಹಾದ್​ ಹಾಗೂ ಸರ್ಪುದ್ದೀನ್ ಎಂಬುವರು ಕ್ಷುಲ್ಲಕ ಕಾರಣಕ್ಕಾಗಿ ಆರೋಪಿ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ್ದರು.

- Advertisement - 

ಅವಮಾನಕ್ಕೆ ಒಳಗಾಗಿದ್ದ ಮಕ್ಸೂದ್ ದ್ವೇಷಿಸಿದ್ದ. ಹಲಸೂರಿನಲ್ಲಿ ತಮ್ಮದೇ ಪ್ರಭಾವವಿರುವುದಾಗಿ ಸಂದೇಶ ಸಾರಲು ಇನ್ನಿಬ್ಬರನ್ನು ಒಗ್ಗೂಡಿಸಿ ದುಷ್ಕೃತವೆಸಗಿದ್ದು ಸದ್ಯ ಮೂವರು ಆರೋಪಿಗಳ ಮೇಲೆ ರೌಡಿಶೀಟ್ ತೆರೆಯಲಾಗುವುದು ಎಂದು ಪೂರ್ವ ವಿಭಾಗದ ಡಿಸಿಪಿ ದೇವರಾಜ್ ತಿಳಿಸಿದ್ದಾರೆ.

 

 

 

 

Share This Article
error: Content is protected !!
";