ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಸಾಸಲು ಹೋಬಳಿ ಅರೂಡಿ ಗ್ರಾಮದ ಹೊರವಲಯದಲ್ಲಿ ಟ್ರಾನ್ಸ್ ಫಾರ್ಮರ್ ನಲ್ಲಿ ಉಂಟಾದ ಶಾರ್ಟ್ಸರ್ಕ್ಯೂಟ್ನಿಂದ ಉಂಟಾದ ಬೆಂಕಿ ಕಿಡಿ ಜಮೀನಿಗೆ ವ್ಯಾಪಿಸಿ , ಸುಮಾರು 40 ಎಕರೆ ಜಮೀನನಲ್ಲಿ ಬೆಳೆಯಲಾಗಿದ್ದ, ಮಾವು, ಅಡಿಗೆ, ತೆಂಗು, ಜಮ್ಮು ನೇರಳೆ ಗಿಡಗಳು ಸಂಪುರ್ಣವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ನಡೆದಿದೆ .
ಬೆಸ್ಕಾಂ ಸಿಬ್ಬಂದಿಗಳ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದು, ಅನೇಕ ಬಾರಿ ಅನಧಿಕೃತ ಸಂಪರ್ಕವನ್ನು ಕಡಿತಗೊಳಿಸದೆ ಯಿರುವುದರಿಂದ ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾಗರಾಜು ಎನ್ನುವರ ಸುಮಾರು 48 ಎಕರೆ ಜಮೀನಲ್ಲಿ ಬೆಳೆಯಲಾಗಿದ್ದ 20 ಎಕರೆ ಮಾವು, ತೆಂಗು, ಅಡಿಕೆ, 28 ಎಕರೆ ಜಮ್ಮು ನೇರಳೆ ಮರಗಳು, ಅಡಿಕೆ ಗಿಡಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅಲ್ಲದೆ 5 ಲಕ್ಷ ಮೌಲ್ಯದ ಹನಿ ನೀರಾವರಿ ಘಟಕಕ್ಕೆ ಅಳವಡಿಸಿದ್ದ ಪೈಪ್ ಲೈನ್ ಸುಟ್ಟು ಭಸ್ಮವಾಗಿದೆ.
ವ್ಯಾಪಕವಾಗಿ ಹರಡಿದ ಬೆಂಕಿಯನ್ನು ನಂದಿಸಲು ಅಗ್ನಿ ಶಾಮಕ ದಳಕ್ಕೆ ಎಷ್ಠು ಬಾರಿ ಕರೆ ಮಾಡಿದರು ಸಂಪರ್ಕ ದೊರಕದೆ, ಬೆಂಕಿಯ ನಂದಿಸಲು ಸಾಧ್ಯವಾಗಿಲ್ಲ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

