ಘಾಟಿ ಸುಬ್ರಮಣ್ಯ ದೇವಾಲಯದ ಹುಂಡಿಯಲ್ಲಿ 65.65 ಲಕ್ಷ ಸಂಗ್ರಹ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ತಾಲೂಕಿನ ತೂಬಗೆರೆ ಹೋಬಳಿಯ ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಭಕ್ತರು ಕಾಣಿಕೆ ರೂಪದಲ್ಲಿ ನೀಡಿ ಹುಂಡಿ ಎಣಿಕೆ ಕಾರ್ಯ ಮಾಡಲಾಯಿತು.

ಭಕ್ತರು ನೀಡಿ ಕಾಣಿಕೆಯ ಹುಂಡಿಯಲ್ಲಿ  ರೂ.65,65,445 ಹಣ ಸಂಗ್ರಹವಾಗಿದೆ. ಇದರೊಂದಿಗೆ 73,600 ರೂ ಮೌಲ್ಯದ 01 ಕೆಜಿ ಬೆಳ್ಳಿ, 2,800 ರೂ ಮೌಲ್ಯದ 700 ಮಿಲಿ ತೂಕದ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.

- Advertisement - 

ಹುಂಡಿಯನ್ನು ದೇವಾಲಯದ   ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತರು ಹುಂಡಿ ಎಣಿಕೆಯಲ್ಲಿ  ಭಾಗವಹಿಸಿ ಸಂತಸ ಪಟ್ಟರು.

 ಈ ಹುಂಡಿ ಕಾಣಿಕೆ ಎಣಿಕೆ ಕಾರ್ಯದಲ್ಲಿ ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪಿ. ದಿನೇಶ್, ಉಪ ಕಾರ್ಯದರ್ಶಿ ಎಂ. ನಾರಾಯಣಸ್ವಾಮಿ, ಮುಜರಾಯಿ ಇಲಾಖೆ ತಹಸಿಲ್ದಾ‌ರ್ ಜಿ.ಜೆ. ಹೇಮಾವತಿ, ಪ್ರಧಾನ ಅರ್ಚಕ ಶ್ರೀನಿಧಿ, ಪ್ರಾಧಿಕಾರದ ಸದಸ್ಯರಾದ ಜೆ.ಎನ್ .ರಂಗಪ್ಪ, ಎಸ್‌.ರವಿ, ಲಕ್ಷ್ಮನಾಯಕ್‌, ಆರ್. ವಿ ಮಹೇಶ್ ಕುಮಾರ್, ಹೇಮಲತಾ ರಮೇಶ್‌, ಪೋಲಿಸ್ ಸಿಬ್ಬಂದಿ ದೇವಾಲಯದ ಸಿಬ್ಬಂದಿ, ಇಂಡಿಯಾನ್ ಓವರ್ಸೀಸ್ ಬ್ಯಾಂಕ್ ಸಿಬ್ಬಂದಿ ಸಾರ್ವಜನಿಕರು ಹಾಜರಿದ್ದರು.

- Advertisement - 

 

 

 

Share This Article
error: Content is protected !!
";