ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ದಿನ ಕಾರ್ಯಕ್ರಮ 

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಲಾವಣ್ಯ ಸಂಯುಕ್ತ ಪದವಿಪೂರ್ವ ಕಾಲೇಜು ಪದವಿ ಕಾಲೇಜು ಬಿಎಡ್ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜಯಂತೋತ್ಸವ ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಲಾವಣ್ಯ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳು ಹಾಗೂ ಟಿಎಪಿಸಿಎಂಎಸ್ ನಿರ್ದೇಶಕ ವಿಶ್ವಾಸ್ ಹನುಮಂತೇಗೌಡ ಮಾತನಾಡಿ ಯುವ ಶಕ್ತಿ ದೇಶದ ಪ್ರಗತಿಗೆ ಪೂರಕವಾಗಿರಬೇಕು ಇಂದಿನ ಯುವ ಜನತೆ ಸ್ವಾಮಿ ವಿವೇಕಾನಂದರ ಆಶಯಗಳನ್ನು ಅನುಷ್ಟಾನಕ್ಕೆ ತರುವ ಜವಾಬ್ದಾರಿ ಹೊರಬೇಕು. ಸ್ವಾಮಿ ವಿವೇಕಾನಂದರ  ಚಿಂತನೆಗಳು ದೇಶದ ಪ್ರಗತಿಗೆ ಪೂರಕವಾಗಿದ್ದವು.

- Advertisement - 

ಹಾಗಾಗಿ ಇಂದಿನ ಯುವಕರು ದೇಶದ ಭವಿಷ್ಯದ ದೃಷ್ಟಿಯಿಂದ ವಿವೇಕಾನಂದರ ಆದರ್ಶಗಳನ್ನು ಮಾದರಿಯಾಗಿ ಅಳವಡಿಸಿ ಕೊಳ್ಳಬೇಕಿದೆ ಎಂದು ಹೇಳಿದರು. ಪ್ರಾಂಶುಪಾಲ ಎಂ. ಸಿ. ಮಂಜುನಾಥ್ ಮಾತನಾಡಿ ಸ್ವಾಮಿ ವಿವೇಕಾನಂದರು ತತ್ವಜ್ಞಾನಿಗಳಾಗಿದ್ದರು “ವೇದದ ತತ್ವಗಳನ್ನು ಯೋಗ ಶಾಸ್ತ್ರವನ್ನು ಇಡೀ ವಿಶ್ವಕ್ಕೆ ಪರಿಚಯಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಹೇಳಿದರು.

   ಪತ್ರಕರ್ತ ಕೊತ್ತೂರಪ್ಪ ಮಾತನಾಡಿ ಯುವಕರು ದೇಶದ ಆಸ್ಥಿ. ಆದರೆ ಇಂದಿನ ಯುವ ಜನಾಂಗದಲ್ಲಿ ಶ್ರದ್ದೆ ಸಹನೆ ಶಾಂತಿ ಕಡಿಮೆಯಾಗಿದೆ ಎಂದು ಹೇಳಿದರು.ಬಿಎಡ್ ಕಾಲೇಜು ಪ್ರಾಂಶುಪಾಲ ಪ್ರೊ ಜಿ ಕೃಷ್ಣಮೂರ್ತಿ ಮಾತನಾಡಿದರು ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಕಾರ್ತಿಕ್ ಮಹಾದೇವ್

- Advertisement - 

ಎನ್ ರಶ್ಮಿ, ಅನುಷಾ, ಹರ್ಷಿತಾ, ಆಶಾ, ಗುರುಪ್ರಸಾದ್, ಗಂಗಮೂರ್ತಿ, ರಾಕೇಶ್, ಪರಿಮಳ, ಅನು, ಮೀನಾ, ಚಂದನ, ಪ್ರಕಾಶ್, ಲತಾ ಹಾಗೂ ಪದವಿ ಪದವಿ ಪೂರ್ವ ಹಾಗೂ ಬಿಎಡ್ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

 

 

Share This Article
error: Content is protected !!
";