ಮಡಿವಾಳ ಮಾಚಿ ದೇವರ ಜಯಂತೋತ್ಸವ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ತಾಲೂಕು ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಣೆ ನಡೆಯಿತು.

ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ತಹಸೀಲ್ದಾರ್‌ ಮಲ್ಲಪ್ಪ.ಕೆ.ಯರಗೋಳ ಮಾತನಾಡಿ, ಕನ್ನಡ ಸಾಹಿತ್ಯ ಪರಂಪರೆಯಲ್ಲಿ 12 ನೇ ಶತಮಾನ ಮಹತ್ವದ ಪಾತ್ರ ವಹಿಸಿದ್ದು, ವಚನಕಾರರ ಕೊಡುಗೆ ಅಪಾರವಾಗಿದೆ. ಬಸವಣ್ಣನವರು ತಮ್ಮ ವಚನಗಳ ಮೂಲಕ ಸಾಮಾಜಿಕ ಕ್ರಾಂತಿ ಮಾಡಿ ಸಮಾಜದ ಅನಿಷ್ಟಗಳನ್ನು ತೊಡೆಯುವ ಪ್ರಯತ್ನ ಮಾಡಿದರು. ಇವರ ಹಾದಿಯಲ್ಲಿಯೇ ಅನೇಕ ಶರಣರು ತಮ್ಮ ಕಾಯಕ ಹಾಗೂ ವಚನಗಳ ಮೂಲಕ ಸಮಾಜದಲ್ಲಿದ್ದ ವೃತ್ತಿ ಆಧಾರಿತ ಜಾತಿ ವ್ಯವಸ್ಥೆ, ಅಸಮಾನತೆ, ಮೇಲು ಕೀಳುಗಳನ್ನು ತೊಡೆದುಹಾಕಲು ಪ್ರಯತ್ನಿಸಿದರು.  ಇಂತಹ ಕಾಲಘಟ್ಟದಲ್ಲಿ  ಜನಿಸಿದ್ದ ಮಡಿವಾಳ ಮಾಚಿದೇವರು ಮಹಾ ಶರಣರಾಗಿ ಅಗ್ರಗಣ್ಯರಾಗಿದ್ದರು.

- Advertisement - 

ವಚನಕಾರರಾಗಿ ಸಮಾಜದಲ್ಲಿನ ಅಸಮಾನತೆ, ಜಾತಿ ಬೇಧ, ಅಂತಕಲಹ ಮುಂತಾದ ಸಾಮಾಜಿಕ ಪಿಡುಗು ನಿವಾರಿಸಲು ಶ್ರಮಿಸಿದ ಮಹಾ ಮಾನವತಾವಾದಿಯಾಗಿದ್ದರು. ಇಂತಹ ಮಹಾಮಹಿಮರ ತತ್ವಾದರ್ಶಗಳು ಈ ಸಮಾಜಕ್ಕೆ ದಾರಿದೀಪವಾಗಬೇಕಿದ್ದು, ಅವರ ವಿಚಾರಧಾರೆಗಳು ಪ್ರಚಾರವಾದರೆ, ಜಯಂತಿಗಳ ಆಚರಣೆಗೆ ಸಾರ್ಥಕತೆ ಬರುತ್ತದೆ ಎಂದರು.

ಸಮುದಾಯಕ್ಕೆ ನಿವೇಶನ ಹಾಗೂ ನಗರದ ಯಾವುದಾದರೂ ರಸ್ತೆಗೆ ನಾಮಕರಣ ಮಾಡುವ ಕುರಿತಂತೆ ಸಂಬಂಧಪಟ್ಟವರ ಗಮನಕ್ಕೆ ತರಲಾಗುವುದು ಎಂದರು.

- Advertisement - 

ತಾಲೂಕು ಮಡಿವಾಳರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಚ್.ಆರ್.ಮುನಿಶಾಮಯ್ಯ ಮಾತನಾಡಿ, ಮಡಿವಾಳ ಮಾಚಿದೇವರು ಶರಣರಾಗಿ ಸಮಾಜ ಸುಧಾರಣೆಗೆ ಶ್ರಮಿಸಿದ್ದರು. ಪವಾಡ ಪುರುಷರಾಗಿದ್ದರು.

ಶರಣರ ಮಡಿಬಟ್ಟಗಳನ್ನು ಹೊರತಾಗಿ ಬೇರೆಯವರ ಮಡಿ ಬಟ್ಟೆಗಳನ್ನು ತೊಳೆಯುವುದಿಲ್ಲ ಎನ್ನುವ ನಿಲುವು ಹೊಂದಿ ತಮ್ಮ ತತ್ವ ಸಿದ್ದಾಂತಗಳಿಗೆ ಬದ್ದರಾಗಿದ್ದರು.  ಮಡಿವಾಳ  ಸಮುದಾಯ ಶೈಕ್ಷಣಿಕವಾಗಿ, ಆರ್ಥಿಕವಾಗಿ ಹಿಂದುಳಿದಿದೆ. ಜಾತಿ ವಿಂಗಡನೆಯಲ್ಲಿ ನಮ್ಮನ್ನು ಪರಿಶಿಷ್ಟವರ್ಗಕ್ಕೆ ಸೇರಿಸುವಲ್ಲಿ ತಾರತಮ್ಯವಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸಬೇಕು, ಮಡಿವಾಳ ಸಮುದಾಯಕ್ಕೆ ಸಮುದಾಯ ಭವನ ಹಾಗೂ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.

ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸಿ.ಎನ್.ಶೇಷಾದ್ರಿ ಮಡಿವಾಳರ ಮಾಚಿದೇವರ ಸಂಘದ ತಾಲ್ಲೂಕು ಅಧ್ಯಕ್ಷ ಶಂಕರಪ್ಪ ಮುಖಂಡರಾದ ರಂಗಸ್ವಾಮಿ, ಸೇರಿದಂತೆ ಮಡಿವಾಳ ಸಮುದಾಯದ ಮುಖಂಡರು ಭಾಗವಹಿಸಿದ್ದರು.

Share This Article
error: Content is protected !!
";