ಫೆ.10ರಂದು ಅಂತರ್ಜಾಲ ಸುರಕ್ಷತಾ ದಿನ ಕಾರ್ಯಾಗಾರ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಇಂದಿನ ವೇಗದ ಡಿಜಿಟಲ್ ಯುಗದಲ್ಲಿ ಹೆಚ್ಚುತ್ತಿರುವ ಸೈಬರ್ ವಂಚನೆ ತಡೆಗಟ್ಟಲು ಹಾಗೂ ಕೃತಕ ಬುದ್ಧಿಮತ್ತೆಯ (
AI)  ಸದ್ಬಳಕೆ ಕುರಿತು ಜಾಗೃತಿ ಮೂಡಿಸಲು ಇದೇ ಫೆಬ್ರವರಿ 10ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಂತರ್ಜಾಲ ಸುರಕ್ಷತಾ ದಿನದ ಕಾರ್ಯಾಗಾರಹಮ್ಮಿಕೊಳ್ಳಲಾಗಿದೆ.

ಗ್ರಾಮೀಣ ಭಾಗಗಳಲ್ಲಿ ಇಂಟರ್ನೆಟ್ ಬಳಕೆದಾರರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇ-ಸೇವೆ ಹಾಗೂ ಡಿಜಿಟಲ್ ಪಾವತಿಗಳು ಹೆಚ್ಚಾದಂತೆ ಸೈಬರ್ ಬೆದರಿಕೆಗಳೂ ಅಪಾರವಾಗಿ ಬೆಳೆದಿವೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ, ವಿಶೇಷವಾಗಿ ಮಹಿಳೆಯರು, ಮಕ್ಕಳು ಮತ್ತು ಯುವಜನರಲ್ಲಿ ಸುರಕ್ಷಿತ ಇಂಟರ್ನೆಟ್ ಬಳಕೆಯ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";